ದೆಹಲಿ ಬಜೆಟ್ ಅನ್ನು ತಡೆಯಬೇಡಿ : ಮೋದಿಗೆ ಕೇಜ್ರಿವಾಲ್ ಪತ್ರ

Public TV
1 Min Read

ನವದೆಹಲಿ: ದೆಹಲಿ ಬಜೆಟ್ (Delhi Budget) ಅನ್ನು ತಡೆಯಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಪತ್ರ ಬರೆದಿದ್ದಾರೆ.

ಮಂಗಳವಾರ ನಿಗದಿಯಾಗಿದ್ದ ದೆಹಲಿ ಸರ್ಕಾರದ 2023-24ನೇ ಸಾಲಿನ ಬಜೆಟ್‍ನ ಮಂಡನೆಯನ್ನು ಕೇಂದ್ರ ಸರ್ಕಾರವು ವಿವಿಧ ಕಾರಣಗಳನ್ನು ನೀಡಿ ತಡೆಹಿಡಿದಿದೆ. ಈ ಹಿನ್ನೆಲೆಯಲ್ಲಿ ಮೋದಿಗೆ ಕೇಜ್ರಿವಾಲ್ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?: ದೇಶದ 75 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ರಾಜ್ಯ ಬಜೆಟ್ ಅನ್ನು ನಿಲ್ಲಿಸಲಾಗಿದೆ. ನೀವು ದೆಹಲಿ ಜನರ ಮೇಲೆ ಏಕೆ ಕೋಪಗೊಂಡಿದ್ದೀರಿ. ದೆಹಲಿಯ ಜನರು ತಮ್ಮ ಬಜೆಟ್ ಅನ್ನು ಅಂಗೀಕರಿಸಲು ಕೈಜೋಡಿಸಿ ಎಂದು ಮನವಿ ಮಾಡುತ್ತೇನೆ ಎಂದು ಬರೆದಿದ್ದಾರೆ.

ದೆಹಲಿಯಲ್ಲಿ ತಲಾ ಆದಾಯ ಹೆಚ್ಚಾಗಿದೆ. ಪ್ರತಿನಿತ್ಯದ ಎಲ್ಲ ಅಡೆತಡೆಗಳನ್ನು ಮೀರಿ ದೆಹಲಿಯ ಆಡಳಿತ ಉತ್ತಮವಾಗಿದೆ. ಯಾವುದೇ ಅಡತಡೆಗಳಿಲ್ಲದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡು ಒಟ್ಟಾಗಿ ಕೆಲಸ ಮಾಡಿದ್ದರೆ ದೆಹಲಿಯ ಅಭಿವೃದ್ಧಿಯನ್ನು ಊಹಿಸಿ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮಹೇಶ್ ಕುಮಠಳ್ಳಿಗೆ ಟಿಕೆಟ್ ನೀಡದಿದ್ದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ: ರಮೇಶ್ ಜಾರಕಿಹೊಳಿ

ಕೇಂದ್ರವು ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ಬಜೆಟ್ ಅನ್ನು ಮರುಪರಿಶೀಲಿಸುವಂತೆ ಕೇಳಿದೆ. ಆಪ್ ಸರ್ಕಾರವನ್ನು ಜಾಹೀರಾತುಗಳಿಗೆ ಹೆಚ್ಚಿನ ಹಂಚಿಕೆ, ಮೂಲಸೌಕರ್ಯ ಮತ್ತು ಇತರ ಅಭಿವೃದ್ಧಿ ಉಪಕ್ರಮಗಳಿಗೆ ನಿಗದಿಪಡಿಸಿ, ಕಡಿಮೆ ಹಣದ ಬಜೆಟ್ ಬಗ್ಗೆ ವಿವರಿಸಲು ಕೇಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳು ಹೇಳಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಐಫೋನ್ ಟಾರ್ಗೆಟ್ ಮಾಡಿ ಕದಿಯುತ್ತಿದ್ದ ಕಳ್ಳರು ಅರೆಸ್ಟ್

Share This Article
Leave a Comment

Leave a Reply

Your email address will not be published. Required fields are marked *