ಪ್ರಸಾದಕ್ಕೆ ವಿಷ ಹಾಕಿದ ಆರೋಪಿಗಳನ್ನು ಕೂಡಲೇ ಗಲ್ಲಿಗೇರಿಸಿ- ಸ್ಥಳೀಯರ ಒತ್ತಾಯ

Public TV
2 Min Read

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಮಾರಮ್ಮ ದೇವಸ್ಥಾನದಲ್ಲಿ ವಿಷ ಹಾಕಿದ ವ್ಯಕ್ತಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಅಂತ ಸ್ಥಳೀಯರು ಒತ್ತಾಯಿಸಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಗ್ರಾಮಸ್ಥರು, ರಾಮಾಪುರದಲ್ಲಿ ಗಾಂಜಾ ಪ್ರಕರಣದಲ್ಲಿ ದೊಡ್ಡಯ್ಯ ಸಿಕ್ಕಿಬಿದ್ದು ಅರೆಸ್ಟ್ ಆಗಿದ್ದ. ಆ ದೊಡ್ಡಯ್ಯನನ್ನು ಮಾರಮ್ಮ ದೇವಾಲಯದ ಟ್ರಸ್ಟ್ ಅಧ್ಯಕ್ಷರಾಗಿರೋ ಸಾಲೂರು ಮಠದ ಇಮ್ಮಡಿ ಮಹದೇವ ಸ್ವಾಮಿ ಬಿಡುಗಡೆಗೊಳಿಸಿ ಟ್ರಸ್ಟಿಯನ್ನಾಗಿ ಮಾಡಿದ್ದಾರೆ ಎಂದು ಹೇಳಿದರು.

ಕಳೆದ 3 ತಿಂಗಳ ಹಿಂದೆ ಸ್ವಾಮೀಜಿ ಸಂಗಮೇಶ ಎನ್ನುವವರಿಗೆ ಕಪಾಳ ಮೋಕ್ಷವನ್ನು ಮಾಡಿದ್ದರು. ಪುಣ್ಯದ ಕೆಲಸ ಮಾಡಬೇಕು ಅಂತ ಹೇಳಿ ದೇವಸ್ಥಾನದ ಗೋಪುರ ಮಾಡುವಾಗ ಎಲ್ಲಿ ನನ್ನ ಹೆಸರು ತಪ್ಪಿ ಹೋಗುತ್ತೋ? ನನ್ನನ್ನು ಬಿಟ್ಟು ಗೋಪುರ ಮಾಡುತ್ತಿದ್ದಾರೆ. ಹೀಗಾಗಿ ನನ್ನ ಕಡೆಯಿಂದಲೇ ಆಗಬೇಕು ಎಂದು ಅದರಲ್ಲಿ ಬರುತ್ತಿರುವ ಆದಾಯವೆಲ್ಲಾ ನಮ್ಮ ನಮಗೆ ಸೇರಬೇಕು ಎನ್ನುವ ಉದ್ದೇಶಕ್ಕಾಗಿ ಈ ರೀತಿಯ ಪಿತೂರಿ ನಡೆಸಿದ್ದಾರೆ ಅಂತ ಆರೋಪಿಸಿದ್ದಾರೆ.

ಸ್ವಾಮೀಜಿ, ದೇವಸ್ಥಾನದ ಅಂದ್ರೆ ಜನರಿಗೆ ಅಪಾರವಾದ ಗೌರವವಿದೆ. ಅದ್ರಲ್ಲೂ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟ ಅಂದ್ರೆ ಬಹಳ ಪ್ರಸಿದ್ಧಿ ಇದೆ. ಆದ್ರೆ ಇಂತಹ ಸ್ವಾಮೀಜಿಗಳಿಂದ ಇಡೀ ಸ್ವಾಮೀಜಿ ಕುಲಕ್ಕೆ ಎಲ್ಲಾ ದೇವಸ್ಥಾನಗಳಿಗೆ ಕೆಟ್ಟ ಹೆಸರು ಬರುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಪ್ರಕರಣ ಸಂಬಂಧ ಸಿಕ್ಕಿಬಿದ್ದವರನ್ನು ಹೆಚ್ಚು ದಿನ ಬಿಡದೆ ಪೊಲೀಸರು ತನಿಖೆ ಮಾಡಿದ ಕೂಡಲೇ ಪ್ರಕರಣದ ಶೀಘ್ರ ಇತ್ಯರ್ಥಕ್ಕೆ ವಿಶೇಷವಾದ ನ್ಯಾಯಾಲಯವನ್ನು ಸ್ಥಾಪಿಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದರು.

ಮುಗ್ಧ ಜನರು ಸ್ವಾಮೀಜಿಗಳನ್ನು ನಂಬುತ್ತಾರೆ. ಇಂತಹವರು ಇರೋದಕ್ಕಿಂತ ಸಾಯೋದೇ ಮುಲು, ಇವರಿಗೆಲ್ಲ ಕಠಿಣ ಶಿಕ್ಷೆ ವಿಧಿಸಬೇಕು. ಗಲ್ಲು ಶಿಕ್ಷೆಯೇ ನೀಡಬೇಕು ಅಂತ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಈಗಾಗಲೇ ಮೃತಪಟ್ಟವರ ಕುಟುಂಬದವರು ಎಷ್ಟು ಸಂಕಟವನ್ನು ಅನುಭವಿಸುತ್ತಿದ್ದಾರೆಯೋ, ಅದು ಅವರಿಗೆ ಅರಿವಾಗಬೇಕು ಅಂತಾದ್ರೆ ಈ ಕ್ಷಣಿಕವೇ ಒಂದು ತಿಂಗಳೊಳಗಡೆ ಗಲ್ಲು ಶಿಕ್ಷೆ ಆಗಬೇಕು. ಇನ್ನೊಬ್ಬರು ಮತ್ತೆ ಇಂತಹ ನೀಚ ಕೃತ್ಯ ಎಸಗಬಾರದು ಅಂತ ಆರೋಪಿಗಳ ವಿರುದ್ಧ ಗ್ರಾಮಸ್ಥರು ಕಿಡಿಕಾರಿದ್ದಾರೆ.

ಸ್ವಾಮೀಜಿಯಿಂದ ಸುಪಾರಿ:
ಹೇಗಾದರೂ ಮಾಡಿ ಇನ್ನೊಂದು ಬಣಕ್ಕೆ ಕೆಟ್ಟ ಹೆಸರು ತರಬೇಕೆಂಬ ಕೆಟ್ಟ ಆಲೋಚನೆ ಇಮ್ಮಡಿ ಸ್ವಾಮೀಜಿಯದ್ದಾಗಿತ್ತು. ಆಗ ಪ್ರಸಾದಕ್ಕೆ ವಿಷ ಬೆರೆಸುವ ಕುತಂತ್ರ ಹೊಳೆದಿದೆ. ವಿಷಮಿಶ್ರಿತ ಪ್ರಸಾದ ಸೇವಿಸಿದವರು ವಾಂತಿ ಮಾಡಿ ಅಸ್ವಸ್ಥಗೊಳ್ಳುತ್ತಾರೆ. ಆಗ ಟ್ರಸ್ಟಿ ಚಿನ್ನಪ್ಪಿ ಹಾಗೂ ಇತರರಿಗೆ ಕೆಟ್ಟ ಹೆಸರು ಬರುತ್ತದೆ. ಇದರಿಂದಾಗಿ ದೇವಸ್ಥಾನ ಸಂಪೂರ್ಣವಾಗಿ ತಮ್ಮ ಆಡಳಿತಕ್ಕೆ ಒಳಪಡುತ್ತೆ ಎಂಬುದು ಸ್ವಾಮೀಜಿ ಪ್ಲಾನ್ ಮಾಡಿಕೊಂಡಿದ್ದರು.

ಸ್ವಾಮೀಜಿ ಮತ್ತು ವ್ಯವಸ್ಥಾಪಕ ಮಾದೇಶ್, ಮಾದೇಶನ ಹೆಂಡತಿ ಅಂಬಿಕಾ (ಅಂಬಿಕಾ ಸ್ವಾಮೀಜಿಯ ಸಂಬಂಧಿಯೂ ಹೌದು) ಈ ಮೂವರು ಸೇರಿ ಪ್ರಸಾದಕ್ಕೆ ವಿಷ ಬೆರೆಸಲು ಸಂಚು ರೂಪಿಸಿದರು. ಕ್ರಿಮಿನಾಶಕ ತಂದು ನಾಗರಕೊಯೀಲು ದೇವಸ್ಥಾನದ ಅರ್ಚಕ ದೊಡ್ಡಯ್ಯನಿಗೆ ನೀಡಿ ಹೇಗಾದರೂ ಮಾಡಿ ಪ್ರಸಾದಕ್ಕೆ ಬೆರೆಸುವಂತೆ ಸುಪಾರಿ ನೀಡಿದರು.

ಈ ಮೂವರ ಅಣತಿಯಂತೆ ದೊಡ್ಡಯ್ಯ ಶಂಕುಸ್ಥಾಪನೆ ಸಮಾರಂಭದ ದಿನ ಎಲ್ಲರ ಕಣ್ತಪ್ಪಿಸಿ ರೈಸ್ ಪ್ರಸಾದಕ್ಕೆ ಕ್ರಿಮಿನಾಶಕ ಮಿಶ್ರಣ ಮಾಡಿದ್ದ. ಈ ವಿಷಯ ಅರಿಯದ ಚಿನ್ನಪ್ಪಿ ಹಾಗೂ ಇತರರು ಶಂಕುಸ್ಥಾಪನೆ ಸಮಾರಂಭಕ್ಕೆ ಬಂದಿದ್ದ ಭಕ್ತರಿಗೆ ವಿಷಮಿಶ್ರಿತ ಪ್ರಸಾದ ವಿತರಿಸಿದ್ದಾರೆ. ನೋಡುನೋಡುತ್ತಿದ್ದಂತೆ ಕೆಲವರಿಗೆ ವಾಂತಿ ಭೇದಿ ಕಾಣಿಸಿಕೊಂಡಿತು. ಒಬ್ಬೊಬ್ಬರಾಗಿ ಸಾವನ್ನಪ್ಪತೊಡಗಿದರು. ಒಟ್ಟಿನಲ್ಲಿ 5 ಮಂದಿಯ ಕುತಂತ್ರಕ್ಕೆ 15 ಮಂದಿ ಅಮಾಯಕರು ಬಲಿಯಾಗಿದ್ದಾರೆ.

https://www.youtube.com/watch?v=GJDDFeVaJcg

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *