ಪ್ರವಾಸಿ ತಾಣವಾದ ಮುತ್ತತ್ತಿಯಲ್ಲಿ ಕಾವೇರಿ ನದಿಗಿಳಿದು ಈಜುವ ಮುನ್ನ ಈ ಸ್ಟೋರಿ ಓದಿ!

Public TV
1 Min Read

ಮಂಡ್ಯ: ಮಳವಳ್ಳಿ ತಾಲೂಕಿನ ಪ್ರಸಿದ್ಧ ಪ್ರವಾಸಿ ಸ್ಥಳ ಮುತ್ತತ್ತಿಗೆ ಆಗಮಿಸಿದ್ದ ಭಕ್ತನೊಬ್ಬ ಕಾವೇರಿ ನದಿಯಲ್ಲಿ ಈಜಲು ಹೋಗಿ ಮೊಸಳೆ ಪಾಲಾಗಿದ್ದಾನೆ.

ಇಂದು ಮುತ್ತತ್ತಿಗೆ ಆಗಮಿಸಿದ್ದ 52 ವರ್ಷದ ವೆಂಕಟೇಶ್ ಕಾವೇರಿ ನದಿಯಲ್ಲಿ ಈಜುವಾಗ ಮೊಸಳೆ ದಾಳಿಗೆ ಬಲಿಯಾಗಿ ಮೃತಪಟ್ಟಿದ್ದಾರೆ. ಪ್ರವಾಸಿ ತಾಣವಾದ ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಕಾವೇರಿ ನದಿ ಹರಿಯುತ್ತಿದ್ದು, ನದಿಯ ಸಮೀಪವೇ ಇರುವ ಆಂಜನೇಯಸ್ವಾಮಿ ದೇವಾಲಯ ಪ್ರಸಿದ್ಧಿ ಪಡೆದಿದೆ. ಹೀಗಾಗಿ ರಜಾ ದಿನಗಳಲ್ಲಿ ಮುತ್ತತ್ತಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ.

ವೆಂಕಟೇಶ್ ಮುತ್ತತ್ತಿ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಲು ಕುಟುಂಬದವರೊಂದಿಗೆ ಆಗಮಿಸಿದ್ದರು. ಪೂಜೆಯ ನಂತರ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದಾರೆ. ಈ ವೇಳೆ ಅವರ ಮೇಲೆ ಮೊಸಳೆ ದಾಳಿ ಮಾಡಿದೆ. ಇದನ್ನು ಗಮನಿಸಿದ ಸ್ಥಳೀಯರು ವೆಂಕಟೇಶ್ ಅವರನ್ನು ರಕ್ಷಿಸಲು ಪ್ರಯತ್ನಿಸಿದ್ದರು. ಆದರೆ ಅದು ಸಾಧ್ಯವಾಗದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ವೆಂಕಟೇಶ್ ಮೃತದೇಹ ಹೊರ ತೆಗೆಯಲಾಗಿದ್ದು, ಬಲಗೈ ಮತ್ತು ಎಡಗಾಲನ್ನು ಮೊಸಳೆ ತಿಂದು ಹಾಕಿದೆ. ಸೂಚನಾಫಲಕ ಗಮನಿಸದೇ ನೀರಿಗಿಳಿದಿದ್ದೇ ವೆಂಕಟೇಶ್ ಸಾವಿಗೆ ಕಾರಣ ಎಂದು ಹೇಳಲಾಗುತ್ತಿದೆ. ಆದ್ದರಿಂದ ಈ ಬಗ್ಗೆ ಪ್ರವಾಸಿಗರು ಗಮನಹರಿಸಬೇಕೆಂದು ಪೆÇಲೀಸರು ಮನವಿ ಮಾಡಿದ್ದಾರೆ. ಈ ಘಟನೆ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *