– ಆಗ್ರಾದ ಸಿಂಗ್ನಾದಲ್ಲಿ ದಕ್ಷಿಣ ಏಷ್ಯಾ ಪ್ರಾದೇಶಿಕ ಕೇಂದ್ರ ಸ್ಥಾಪನೆಗೆ ಅನುಮೋದನೆ
ಹುಬ್ಬಳ್ಳಿ: ಕೇಂದ್ರ ಸರ್ಕಾರ, ಉತ್ತರ ಪ್ರದೇಶದಲ್ಲಿ (Uttar Pradesh) ಅಂತಾರಾಷ್ಟ್ರೀಯ ಆಲೂಗಡ್ಡೆ ಕೇಂದ್ರದ ದಕ್ಷಿಣ ಏಷ್ಯಾ ಪ್ರಾದೇಶಿಕ ಕೇಂದ್ರ ಸ್ಥಾಪಿಸಲು ಸಜ್ಜಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ (Prahlad Joshi) ತಿಳಿಸಿದರು.
ಆಗ್ರಾದ (Agra) ಸಿಂಗ್ನಾದಲ್ಲಿ ಈ ಕೇಂದ್ರ ತೆರೆಯಲು ನಿರ್ಣಯಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಇದಕ್ಕೆ ಅನುಮೋದನೆ ನೀಡಿದೆ. ಉತ್ತರ ಪ್ರದೇಶದ ಆಗ್ರಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ಕೇಂದ್ರದ ದಕ್ಷಿಣ ಏಷ್ಯಾ ಪ್ರಾದೇಶಿಕ ಕೇಂದ್ರ ಸ್ಥಾಪಿಸುವ ಕುರಿತು ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ಸಲ್ಲಿಸಿದ ಪ್ರಸ್ತಾವನೆಗೆ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ.ಇದನ್ನೂ ಓದಿ: Rain Alert | ಹಾಸನ ಜಿಲ್ಲೆಯ 3, ಉತ್ತರ ಕನ್ನಡ ಜಿಲ್ಲೆಯ 2 ತಾಲೂಕಿನ ಶಾಲೆಗಳಿಗೆ ಗುರುವಾರ ರಜೆ
ಆಲೂಗಡ್ಡೆ, ಸಿಹಿಗೆಣಸು ಉತ್ಪಾದನೆ ಹಾಗೂ ಸುಗ್ಗಿ ನಂತರದಲ್ಲೂ ಇವುಗಳ ಆಹಾರೋತ್ಪನ್ನ, ಮೌಲ್ಯವರ್ಧಿತ ಆಹಾರ ಪದಾರ್ಥ, ಪೌಷ್ಟಿಕಾಂಶ ಭರಿತ ಆಹಾರ ಭದ್ರತೆ, ರೈತರ ಆದಾಯ ಹೆಚ್ಚಳ ಹಾಗೂ ಹೆಚ್ಚು ಉದ್ಯೋಗಾವಕಾಶ ಕಲ್ಪಿಸುವಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ಕೇಂದ್ರ ನೆರವಾಗಲಿದೆ.
ಅಂತಾರಾಷ್ಟ್ರೀಯ ಆಲೂಗಡ್ಡೆ ಪ್ರಾದೇಶಿಕ ಕೇಂದ್ರ ಸ್ಥಾಪನೆಯಿಂದ ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೆಚ್ಚು ಹೂಡಿಕೆಯನ್ನೂ ಆಕರ್ಷಿಸಲಿದೆ. ಭಾರತದಲ್ಲಿ ಆಲೂಗಡ್ಡೆ ವಲಯವು ಉತ್ಪಾದನೆ, ಆಹಾರ ಸಂಸ್ಕರಣೆ, ಪ್ಯಾಕೇಜಿಂಗ್, ಸಾರಿಗೆ, ಮಾರುಕಟ್ಟೆ ಇತ್ಯಾದಿಗಳಲ್ಲಿ ಗಮನಾರ್ಹ ಉದ್ಯೋಗಾವಕಾಶ ಸೃಷ್ಟಿಸುವ ಸಾಮರ್ಥ್ಯ ಹೊಂದಿದೆ. ಹಾಗಾಗಿ ಇದನ್ನು ಮತ್ತಷ್ಟು ವಿಸ್ತರಿಸಲು ಕೇಂದ್ರ ಸರ್ಕಾರ ಮುಂದಡಿ ಇಟ್ಟಿದೆ ಎಂದಿದ್ದಾರೆ.
ಅSAಖಅ ಅಭಿವೃದ್ಧಿಪಡಿಸಿದ ಹೆಚ್ಚಿನ ಇಳುವರಿ ನೀಡುವ, ಪೋಷಕಾಂಶ ಮತ್ತು ಹವಾಮಾನ ಆಧಾರಿತ ತಳಿಗಳ ಆಲೂಗಡ್ಡೆ ಮತ್ತು ಸಿಹಿಗೆಣಸು ಭಾರತದಲ್ಲಿ ಮಾತ್ರವಲ್ಲದೆ ದಕ್ಷಿಣ ಏಷ್ಯಾ ಪ್ರದೇಶದಲ್ಲಿಯೂ ಹೆಚ್ಚು ಉತ್ಪಾದನೆ ಮತ್ತು ಬಳಕೆಯಲ್ಲಿದ್ದು, ವಿಶ್ವದರ್ಜೆ ಮಾರುಕಟ್ಟೆ ಕಲ್ಪಿಸುವಲ್ಲಿ ಈ ಕೇಂದ್ರ ನೆರವಾಗಲಿದೆ.
ಆಲೂಗಡ್ಡೆ, ಸಿಹಿಗೆಣಸು ಅನ್ವೇಷಣೆ ಮತ್ತು ಅಂತಾರಾಷ್ಟ್ರೀಯ ಆಲೂಗಡ್ಡೆ ಕೇಂದ್ರದ ದಕ್ಷಿಣ ಏಷ್ಯಾ ಪ್ರಾದೇಶಿಕ ಕೇಂದ್ರವನ್ನು ಉತ್ತರ ಪ್ರದೇಶದ ಆಗ್ರಾದ ಸಿಂಗ್ನಾದಲ್ಲಿ ಸ್ಥಾಪಿಸುವುದರಿಂದ ಭಾರತದಲ್ಲಿ ಆಲೂಗಡ್ಡೆ ಮತ್ತು ಸಿಹಿಗೆಣಸು ವಲಯಗಳ ಸುಸ್ಥಿರ ಅಭಿವೃದ್ಧಿಗೂ ಗಮನಾರ್ಹ ಕೊಡುಗೆ ನೀಡಲಿದೆ ಎಂದರು.ಇದನ್ನೂ ಓದಿ: ಲೋಕಸಭಾಧ್ಯಕ್ಷ ಓಂ ಬಿರ್ಲಾರನ್ನು ಭೇಟಿ ಮಾಡಿದ ಯು.ಟಿ.ಖಾದರ್