ನನ್ನ ವಿರುದ್ಧ ಪ್ರಚಾರ ನಡೆಸಲು ಪ್ರಧಾನಿ ಮೋದಿ ಬರಬೇಕಿತ್ತು: ಕಾಂಗ್ರೆಸ್ ಅಭ್ಯರ್ಥಿ

Public TV
1 Min Read

ಬಳ್ಳಾರಿ: ಜಿಲ್ಲೆಯ ಹೊಸಪೇಟೆಗೆ ಪ್ರಧಾನಿ ನರೇಂದ್ರ ಮೋದಿ ಬಂದು ಪ್ರಚಾರ ಮಾಡಿದ್ರೆ ಚೆನ್ನಾಗಿರುತ್ತಿತ್ತು. ಯಾಕಂದ್ರೆ ನನ್ನನ್ನೂ ಸೋಲಿಸಲು ಪ್ರಧಾನಿ ಬಂದಿದ್ರೂ ಅನ್ನೋ ಇತಿಹಾಸವಾದ್ರೂ ನಿರ್ಮಾಣವಾಗುತ್ತಿತ್ತು ಅಂತಾ ವಿಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದ್ ಸಿಂಗ್ ಲೇವಡಿ ಮಾಡಿದ್ದಾರೆ.

ಬುಧವಾರ ಹೊಸಪೇಟೆಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಆನಂದ್ ಸಿಂಗ್, ಪ್ರಧಾನಿ ಮೋದಿ ಬರುವ ಬದಲು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬಂದೂ ಪ್ರಚಾರ ಮಾಡಿದ್ದಾರೆ. ಇದ್ರಿಂದ ಏನೂ ಬದಲಾವಣೆ ಆಗಲ್ಲ ಅಂತ ಕಿಡಿಕಾರಿದ್ದಾರೆ.

ನನ್ನ ಮೇಲೆ ವಿನಾಕಾರಣ ಆರೋಪ ಮಾಡಲಾಗುತ್ತಿದ್ದು, ನನ್ನ ಹಿಂದೆ ಕೆಲ ತೋಳಗಳು ಕೆಲಸ ಮಾಡುತ್ತಿವೆ. ಆದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಈ ಚುನಾವಣೆ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದ್ದು, ಮುಂದಿನ 2019ರಲ್ಲಿ ಕೆಂಪುಕೋಟೆ ಮೇಲೆ ಕಾಂಗ್ರೆಸ್ ಬಾವುಟ ಏರಿಸುತ್ತೆವೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಹೊಸಪೇಟೆಯನ್ನು ಜಿಲ್ಲೆಯನ್ನಾಗಿ ಮಾಡಲಾಗುವುದೆಂದು ಆನಂದಸಿಂಗ್ ಘೋಷಣೆ ಮಾಡಿದ್ರು.

Share This Article
Leave a Comment

Leave a Reply

Your email address will not be published. Required fields are marked *