ನವದೆಹಲಿ: ತಮಿಳುನಾಡು ಚುನಾವಣೆ ಹಿನ್ನೆಲೆ ಕೇಂದ್ರ ಸಚಿವ ಮುರುಗನ್ (L.Murugan) ದೆಹಲಿ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಪೊಂಗಲ್ ಸಂಭ್ರಮದಲ್ಲಿ ಭಾಗಿಯಾದರು.
ನವದೆಹಲಿಯಲ್ಲಿ ಕೇಂದ್ರ ಸಚಿವ ಎಲ್.ಮುರುಗನ್ ಅವರ ನಿವಾಸದಲ್ಲಿ ನಡೆದ ಪೊಂಗಲ್ ಹಬ್ಬದ (Pongal Festival) ಆಚರಣೆಯಲ್ಲಿ ಮೋದಿ ಭಾಗವಹಿಸಿದರು. ಸಾಂಪ್ರದಾಯಿಕ ಆಚರಣೆಗಳಲ್ಲಿ ಪಾಲ್ಗೊಂಡರು. ಸುಗ್ಗಿಯ ಹಬ್ಬದ ಸಾಂಸ್ಕೃತಿಕ ಮಹತ್ವದ ಕುರಿತು ಸಭೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ಇದನ್ನೂ ಓದಿ: ವರ್ಷದ ಮೊದಲ ಹಬ್ಬ; ವಿವಿಧ ರಾಜ್ಯಗಳಲ್ಲಿ ಮಕರ ಸಂಕ್ರಾಂತಿ ಆಚರಣೆ ಹೇಗೆ?
ಆಚರಣೆಯ ಸಂದರ್ಭದಲ್ಲಿ, ಪೊಂಗಲ್ ಭಾರತದ ಕೃಷಿ ಸಂಪ್ರದಾಯಗಳನ್ನು ಪ್ರತಿಬಿಂಬಿಸುತ್ತದೆ. ತಮಿಳು ನಾಗರಿಕತೆಯ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರದರ್ಶಿಸುತ್ತದೆ. ಪೊಂಗಲ್ನಂತಹ ಹಬ್ಬಗಳು ಏಕ ಭಾರತ ಶ್ರೇಷ್ಠ ಭಾರತ ಮನೋಭಾವವನ್ನು ಬಲಪಡಿಸುತ್ತವೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ.
ಪೊಂಗಲ್ ಹಬ್ಬವು ಪ್ರಪಂಚದಾದ್ಯಂತ ತಮಿಳು ಸಮುದಾಯಗಳು ಉತ್ಸಾಹದಿಂದ ಆಚರಿಸುವ ಜಾಗತಿಕ ಹಬ್ಬವಾಗಿ ವಿಕಸನಗೊಂಡಿದೆ. ಪೊಂಗಲ್ ಆಚರಣೆಯ ಸಂದರ್ಭದಲ್ಲಿ ಮೋದಿ ಪ್ರಾರ್ಥನೆ ಸಲ್ಲಿಸಿದರು. ಸುಗ್ಗಿಯ ಹಬ್ಬಕ್ಕೆ ಸಂಬಂಧಿಸಿದ ಸಾಂಪ್ರದಾಯಿಕ ಆಚರಣೆಗಳಲ್ಲಿ ಭಾಗವಹಿಸಿ ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ಸುವರ್ಣ ಸಂಕ್ರಾಂತಿ ಸಂಭ್ರಮದಲ್ಲಿ ತಾರೆಯರ ಸಮಾಗಮ
ಈ ವೇಳೆ ಮೋದಿ ಹಸುಗಳಿಗೆ ಆಹಾರ ನೀಡಿದರು. ಪೊಂಗಲ್ ರೈತರ ಕಠಿಣ ಪರಿಶ್ರಮದ ಮೇಲೆ ಬೆಳಕು ಚೆಲ್ಲುತ್ತದೆ. ಭಾರತದ ಸಾಂಸ್ಕೃತಿಕ ಜೀವನದಲ್ಲಿ ಕೃಷಿಯ ಮಹತ್ವವನ್ನು ಎತ್ತಿ ತೋರಿಸುತ್ತದೆ ಎಂದು ಮೋದಿ ತಿಳಿಸಿದ್ದಾರೆ.

