ಮೋದಿ ದೇಶದಲ್ಲಿ `ಮೌನಿ ಬಾಬಾ’, ವಿದೇಶದಲ್ಲಿ ಮಾತ್ರ ಮಾತಾಡ್ತಾರೆ : ಶಿವಸೇನೆ

Public TV
2 Min Read

ಮುಂಬೈ: ಬಿಜೆಪಿ ಪಕ್ಷದ ಬಹುಕಾಲದ ಮಿತ್ರ ಪಕ್ಷವಾಗಿದ್ದ ಶಿವಸೇನೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಮೋದಿ ದೇಶದ ಸ್ಥಳೀಯ ವಿಷಯಗಳನ್ನು ವಿದೇಶಿದಲ್ಲಿ ನಿಂತು ಮಾತನಾಡುತ್ತಾರೆ. ಪ್ರಧಾನಿಗಳ ಈ ನಡೆ ಸೂಕ್ತವಲ್ಲ ಎಂದು ಕಿಡಿಕಾರಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಇಂಗ್ಲೆಂಡ್ ಪ್ರವಾಸವನ್ನು ಟೀಕಿಸಿರುವ ಶಿವಸೇನೆ, ಬಹುಕೋಟಿ ಸಾಲ ಮಾಡಿ ಇಂಗ್ಲೆಂಡ್ ಗೆ ಪರಾರಿಯಾಗಿರುವ ವಿಜಯ್ ಮಲ್ಯ ಅಲ್ಲೇ ಇದ್ದರೂ ಪ್ರಧಾನಿಗಳು ಬರಿಗೈ ನಲ್ಲಿ ಭಾರತಕ್ಕೆ ವಾಪಸ್ ಆಗುತ್ತಿದ್ದಾರೆ ಅಂತಾ ವ್ಯಂಗ್ಯ ಮಾಡಿದೆ.

ತನಗೆ ಕಾಂಗ್ರೆಸ್ ಅಥವಾ ಗಾಂಧಿ ಹೆಸರಿನ ಕುಟುಂಬದ ವಿರುದ್ಧ ಅಸಮಾಧಾನವಿದ್ದು, ಆದರೆ ದೇಶದ ವಿಷಯಗಳ ಕುರಿತು ವಿದೇಶದಲ್ಲಿ ಮಾತನಾಡುವುದು ಯಾರಿಗೂ ಲಾಭ ತಂದು ಕೊಡುವುದಿಲ್ಲ ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಹೇಳಿದೆ.

ಇದೇ ವೇಳೆ ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸಲಹೆಯನ್ನು ಅನುಸರಿಸಬೇಕು ಎಂದು ತಿಳಿಸಿದೆ. ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದ ಮನಮೋಹನ್ ಸಿಂಗ್ ತಮ್ಮ ಆಡಳಿತ ಅವಧಿಯಲ್ಲಿ ಹೇಗೆ ತಮ್ಮನ್ನು ಮೌನಿ ಎಂದು ಟೀಕಿಸುತ್ತಿದ್ದು ಇಂದು ತಮಗೂ ಆನ್ವಯವಾಗುತ್ತದೆ ಎಂದು ಹೇಳಿದ್ದರು. ಈ ಹೇಳಿಕೆಯನ್ನು ಶೀವಸೇನೆ ತನ್ನ ಮುಖವಾಣಿ ಸಾಮ್ನಾ ಪತ್ರಿಕೆ ಸಂಪಾದಕೀಯದಲ್ಲಿ ಬರೆದುಕೊಂಡಿದೆ.

ಇಂಗ್ಲೆಂಡ್ ಪ್ರವಾಸದ ವೇಳೆ ಪ್ರಧಾನಿ ಮೋದಿ ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳ ಕುರಿತು ಲಂಡನ್ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ ಭಾವುಕರಾಗಿದ್ದರು. ಅಲ್ಲದೇ ಕಳೆದ ಬಾರಿ ಜಪಾನ್ ಪ್ರವಾಸದ ವೇಳೆ ಸಭೆಯೊಂದರಲ್ಲಿ ಭ್ರಷ್ಟಾಚಾರದ ಕುರಿತು ಹೇಳಿಕೆ ನೀಡಿದ್ದರು. ಈ ಎರಡು ಘಟನೆಗಳನ್ನು ತನ್ನ ಸಂಪಾದಕೀಯದಲ್ಲಿ ಉಲ್ಲೇಖಿಸಿರುವ ಶಿವಶೇನೆ ವಿದೇಶದಲ್ಲಿ ಭಾರತ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿ ದೇಶದ ಹೆಸರಿಗೆ ಕೆಟ್ಟ ಅಭಿಪ್ರಾಯ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿದೆ.  ಇದನ್ನೂ ಓದಿ : ದೇಶದ ಮಹಿಳೆಯರ ಸುರಕ್ಷತೆ ಬಗ್ಗೆ ಮೋದಿ ಗಮನ ಹರಿಸಬೇಕು- ಐಎಂಎಫ್ ಮುಖ್ಯಸ್ಥೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸದ್ಯ ಮಾತನಾಡಲು ಆರಂಭಿಸಿದ್ದಾರೆ. ಆದರೆ ಪ್ರಧಾನಿಗಳು ಮೌನಿಯಾಗಿದ್ದಾರೆ. ರಾಹುಲ್ ಗಾಂಧಿ ಮೋದಿ ಅವರನ್ನು ಮೌನವಾಗಿ ಮಾಡಲು 15 ನಿಮಿಷ ಸಮಯಾವಕಾಶ ಕೇಳಿರುವುದು ಪ್ರಧಾನಿ ಮೌನಿಯಾಗಿದ್ದರೆ ಎಂಬುವುದಕ್ಕೆ ಸೂಕ್ತ ಸಾಕ್ಷಿ ಎಂದು ಹೇಳಿದೆ.  ಇದನ್ನೂ ಓದಿ: ನಮಗೆ ದೇಶಭಕ್ತಿ ಬಗ್ಗೆ ಬೋಧನೆ ಮಾಡಬೇಡಿ ಎಂದು ಬಿಜೆಪಿ ವಿರುದ್ಧ ಹರಿಹಾಯ್ದ ಉದ್ಧವ್ ಠಾಕ್ರೆ

 

Share This Article
Leave a Comment

Leave a Reply

Your email address will not be published. Required fields are marked *