ಭಾರತ ಮೂಲದ ತಮಿಳು ಸಮುದಾಯಕ್ಕೆ 10,000 ಮನೆ ನಿರ್ಮಾಣ ಭರವಸೆ ನೀಡಿದ ಮೋದಿ

Public TV
2 Min Read

ಕೊಲಂಬೊ: ಶ್ರೀಲಂಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ ಅವರನ್ನ ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಲಂಕಾದಲ್ಲಿ ನೆಲೆಸಿರುವ ಭಾರತೀಯ ಮೂಲದ ತಮಿಳು ಸಮುದಾಯಕ್ಕೆ (Indian-Origin Tamil community) ಸಿಹಿ ಸುದ್ದಿ ಕೊಟ್ಟಿದ್ದಾರೆ.

ಹೌದು. ಶ್ರೀಲಂಕಾದಲ್ಲಿ (Sri Lanka) ನೆಲೆಸಿರುವ ಭಾರತೀಯ ಮೂಲದ ತಮಿಳು ಸಮುದಾಯಕ್ಕೆ 10,000 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಹೇಳಿದ್ದಾರೆ. ಜೊತೆಗೆ ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳಿಸುವ ಭರವಸೆಯನ್ನೂ ನೀಡಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿಗೆ ಶ್ರೀಲಂಕಾದ ಅತ್ಯುನ್ನತ ಗೌರವ ‘ಮಿತ್ರ ವಿಭೂಷಣ’‌ ಪ್ರಶಸ್ತಿ ಪ್ರದಾನ

ಭಾರತ ಸರ್ಕಾರ ತಮಿಳುನಾಡು ಮತ್ತು ಶ್ರೀಲಂಕಾದಲ್ಲಿರುವ ಭಾರತದ ಜನರ ನಡುವೆ ಶಾಂತಿಯುತ ಸಂಬಂಧ ಕಾಪಾಡಲು ಪ್ರಯತ್ನಿಸುತ್ತಿದೆ. ಈ ನಿಟ್ಟಿನಲ್ಲಿ ಭಾರತ ಸರ್ಕಾರ ಮೊದಲ ಹೆಜ್ಜೆಯನ್ನಿಟ್ಟಿದೆ. ಶ್ರೀಲಂಕಾ ಸರ್ಕಾರವು ತಮಿಳರ ಆಕಾಂಕ್ಷೆಗಳನ್ನು ಈಡೇರಿಸುತ್ತದೆ ಮತ್ತು ಸಂವಿಧಾನತ್ಮಕವಾಗಿ ಕೆಲಸ ಮಾಡುತ್ತದೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದರು.

ಪ್ರಧಾನಿ ಮೋದಿ ಹಾಗೂ ಲಂಕಾ ಅಧ್ಯಕ್ಷರ ಮಧ್ಯೆ ವಿಸ್ತೃತವಾದ ಮಾತುಕತೆಯ ಬಳಿಕ 7 ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಯಿತು. ಇದನ್ನೂ ಓದಿ: ಏ.10ರಿಂದ ಅಮೆರಿಕದ ಸರಕುಗಳ ಮೇಲೆ 34% ಆಮದು ಸುಂಕ – ಚೀನಾ ಪ್ರತೀಕಾರದ ಸುಂಕಕ್ಕೆ ದೊಡ್ಡಣ್ಣ ಗರಂ

ಮೀನುಗಾರರ ಬಿಡುಗಡೆ:
ಉಭಯ ದೇಶಗಳ ರಕ್ಷಣಾ ಒಪ್ಪಂದದ ಮಾತುಕತೆಯ ನಡುವೆ ಮೀನುಗಾರರ ಜೀವನೋಪಾಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಇದನ್ನೂ ಓದಿ: ನೇಪಾಳದಲ್ಲಿ 5.0 ತೀವ್ರತೆಯ ಭೂಕಂಪನ – ಉತ್ತರ ಭಾರತದಲ್ಲೂ ಎಫೆಕ್ಟ್‌

ಈ ವಿಷಯದಲ್ಲಿ ಮಾನವೀಯ ದೃಷ್ಟಿಕೋನವನ್ನು ತೆಗೆದುಕೊಳ್ಳಲು ಒಪ್ಪಿಗೆ ನೀಡಲಾಗಿದೆ. ಮೀನುಗಾರರನ್ನು ತಕ್ಷಣ ಬಿಡುಗಡೆ ಮಾಡಲು ಮತ್ತು ಅವರ ದೋಣಿಗಳನ್ನು ಹಿಂದಿರುಗಿಸಲು ಒತ್ತಿ ಹೇಳಿದರು. ಭಾರತ ಮತ್ತು ಶ್ರೀಲಂಕಾ ನಡುವಿನ ಸಂಬಂಧವು ಪರಸ್ಪರ ನಂಬಿಕೆ ಮತ್ತು ಸದ್ಭಾವನೆಯನ್ನು ಆಧರಿಸಿದೆ ಎಂದು ಅವರು ಹೇಳಿದರು.

Share This Article