ನೀನು ಸೂರ್ಯ, ನಿನ್ನಲ್ಲಿ ತೇಜಸ್ಸು ಇದೆ: ಪ್ರಧಾನಿ ಮೋದಿ

Public TV
2 Min Read

ಬೆಂಗಳೂರು: ಸಿಲಿಕಾನ್ ಸಿಟಿಯ ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ಪಡೆದ ತೇಜಸ್ವಿ ಸೂರ್ಯ ಅವರನ್ನು ಪ್ರಧಾನಿ ಮೋದಿ ಅವರೇ ಆಯ್ಕೆ ಮಾಡಿದ್ದಾರಾ ಹೀಗೊಂದು ಚರ್ಚೆ ಈಗ ಬಿಜೆಪಿ ವಲಯದಲ್ಲಿ ಆರಂಭವಾಗಿದೆ.

ಈ ಹಿಂದೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಪ್ರಧಾನಿ ಮೋದಿ ಕರ್ನಾಟಕದ ಬಿಜೆಪಿ ಯುವಾ ಮೋರ್ಚಾದ ಜತೆ ಮಾತನಾಡುತ್ತಿದ್ದರು. ಈ ವೇಳೆ ತೇಜಸ್ವಿಸೂರ್ಯ ಅವರ ಹೆಸರನ್ನು ಹೇಳಿ, “ನೀನು ಸೂರ್ಯ, ನಿನ್ನಲ್ಲಿ ತೇಜಸ್ಸು ಇದೆ” ಎಂದು ಮೋದಿ ಹೊಗಳಿದ್ದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲು ಆರಂಭವಾಗಿದೆ.

ಸಂವಾದದ ಆರಂಭದಲ್ಲಿ “ಮೋದಿಜೀ ನಮಸ್ತೇ” ಎಂದು ತೇಜಸ್ವಿ ಸೂರ್ಯ ಹೇಳಿ ಮಾತನ್ನು ಆಡಲು ಆರಂಭಿಸುತ್ತಾರೆ. ಈ ವೇಳೆ ಮೋದಿ, “ಅಪ್ ತೋ ಸ್ವಯಂ ಸೂರ್ಯ ಹೇ ಔರ್ ತೇಜಸ್ವಿ ಬಿ ಹೇ” ಎಂದು ಹೇಳಿ ಹೊಗಳಿದ್ದರು. ಇದನ್ನೂ ಓದಿ: ಮೂರು ದಿನದ ಹಿಂದೆ ತೇಜಸ್ವಿ ಸೂರ್ಯಗೆ ಮನವಿ ಮಾಡಿದ್ದ ತೇಜಸ್ವಿನಿ!

ಕರ್ನಾಟಕದ ಪೈಕಿ ಬೆಂಗಳೂರು ದಕ್ಷಿಣ ಕೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. 1977ಕ್ಕೆ ಲೋಕಸಭಾ ಕ್ಷೇತ್ರವಾಗಿ ರಚನೆಯಾಗಿದ್ದು ಆರಂಭದ ಮೂರು ಚುನಾವಣೆಯಲ್ಲಿ ಜನತಾ ಪಕ್ಷ ಇಲ್ಲಿ ಗೆಲುವನ್ನು ಕಂಡಿತ್ತು. 1989 ರಲ್ಲಿ ಒಂದು ಬಾರಿ ಕಾಂಗ್ರೆಸ್ ಗೆಲುವು ಕಂಡಿದ್ದು, ನಂತರ ನಡೆದ ಎಲ್ಲ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದೆ. 1996ರಿಂದ 2014ರ ವರೆಗೆ ನಡೆದ ಎಲ್ಲ ಚುನಾವಣೆಯಲ್ಲಿ ಕಳೆದ ವರ್ಷ ನಿಧನರಾಗಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಜಯಗಳಿಸುತ್ತಾ ಬಂದಿದ್ದರು. ಇದನ್ನೂ ಓದಿ: ‘ಅನುಕಂಪದ ಮೇಲೆ ಟಿಕೆಟ್ ಕೊಟ್ಟರೆ ಪಕ್ಷ ಸಂಘಟನೆ ಮಾಡೋದು ಹೇಗೆ?’

ಅನಂತ್ ಕುಮಾರ್ ಅವರನ್ನು ಸೋಲಿಸಲೇಬೇಕೆಂದು ಕಾಂಗ್ರೆಸ್ ಕಳೆದ ಬಾರಿ ಇನ್ಫೋಸಿಸ್ ಸಹ ಸಂಸ್ಥಾಪಕ ನಂದನ್ ನಿಲೇಕಣಿ ಅವರನ್ನು ಕಣಕ್ಕೆ ಇಳಿಸಿತ್ತು. ಬೆಂಗಳೂರು ದಕ್ಷಿಣ ಕ್ಷೇತ್ರ ನಗರದಲ್ಲೇ ಇರುವುದರ ಜೊತೆಗೆ ಸಾಕ್ಷರತಾ ಮತದಾರರ ಸಂಖ್ಯೆಯೂ ಹೆಚ್ಚು ಇರುವ ಕಾರಣದಿಂದಲೂ ಈ ಕ್ಷೇತ್ರದಲ್ಲಿ ಭಾರೀ ಸ್ಪರ್ಧೆ ನಡೆಯಲಿದೆ ಎಂದು ವಿಶ್ಲೇಷಿಸಲಾಗಿತ್ತು. ಆದರೆ ಅಂತಿಮವಾಗಿ ಅನಂತ್ ಕುಮಾರ್ 2.28 ಲಕ್ಷ ಮತಗಳ ಅಂತರದಿಂದ ವಿಜಯಿಯಾದರು. ಅನಂತ್ ಕುಮಾರ್ 6,33,816 ಮತಗಳನ್ನು ಪಡೆದಿದ್ದರೆ, ನಿಲೇಕಣಿ 4,05,241 ಮತಗಳನ್ನು ಪಡೆದಿದ್ದರು.

Share This Article
Leave a Comment

Leave a Reply

Your email address will not be published. Required fields are marked *