ಜಾನುವಾರು ಸಾಗಿಸುತ್ತಿದ್ದ ಐವರ ಬಂಧನ

Public TV
1 Min Read

ಬೆಂಗಳೂರು: ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಐವರನ್ನು ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಐವರು ಆರೋಪಿಗಳು ಅಕ್ರಮವಾಗಿ ಆನೇಕಲ್ ನ ಚಂದಾಪುರ ಸಂತೆಯಿಂದ ತಮಿಳುನಾಡಿಗೆ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಖಚಿತ ಮಾಹಿತಿ ಪಡೆದ ಕೌ ಕ್ಯಾನ್ ಪೌಂಡೇಶನ್ ಸಂಸ್ಥೆಯ ರಮಣ್ ಎಂಬವರ ನೇತೃತ್ವದ ತಂಡವು, ಅತ್ತಿಬೆಲೆಯ ಟೋಲ್ ಗೇಟ್ ಬಳಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದೆ.

ಈ ವೇಳೆ ವಾಹನದಲ್ಲಿ ಅಕ್ರಮವಾಗಿ 7 ಎತ್ತುಗಳು ಹಾಗೂ 21 ಸೀಮೆಹಸುವಿನ ಕರುಗಳನ್ನು ಕಂಡುಬಂದಿದ್ದು, ಕೂಡಲೇ ವಾಹನದಲ್ಲಿದ್ದ ಐವರನ್ನು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಸಂಘಟನೆಯು ವಶಪಡಿಸಿಕೊಂಡ ಜಾನುವಾರುಗಳನ್ನು ಆದಿಚುಂಚನಗಿರಿ ಮಠದ ಗೋಶಾಲೆಗೆ ಕಳುಹಿಸಿಕೊಟ್ಟಿದ್ದಾರೆ.

ಘಟನೆ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

Share This Article
Leave a Comment

Leave a Reply

Your email address will not be published. Required fields are marked *