ರೌಡಿಸಂನಲ್ಲಿ ಹವಾ ಸೃಷ್ಟಿಸಲು ರೌಡಿ ಶೀಟರ್ ಗೆ 50 ಕಡೆ ಚುಚ್ಚಿ ಬರ್ಬರ ಹತ್ಯೆ

Public TV
1 Min Read

ಬೆಂಗಳೂರು: ರೌಡಿಸಂನಲ್ಲಿ ಹವಾ ಸೃಷ್ಟಿಸಲು ರೌಡಿ ಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು ಹೊರವಲಯ ಆನೇಕಲ್‍ ನ ಮಾಯಸಂದ್ರದ ರೌಡಿಶೀಟರ್ ಜಯಂತ್‍ನನ್ನು ಅಪಹರಿಸಿ ಬಿಯರ್ ಬಾಟಲಿನಿಂದ ಸುಮಾರು 50 ಕಡೆ ಚುಚ್ಚಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಆರೋಪಿ ಸುನಿಲ್ ನನ್ನೂ ಬಂಧಿಸಲಾಗಿದೆ. ಆರೋಪಿ ಸುನಿಲ್ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದನು. ನಂತರ ಅತ್ತಿಬೆಲೆ ಪೊಲೀಸರು 29 ದಿನಗಳ ನಂತರ ಹೊಸಕೋಟೆ ಬಳಿ ಇರುವ ಬಗ್ಗೆ ಮಾಹಿತಿ ತಿಳಿದು ಅಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯು ರೌಡಿಶೀಟರ್ ಆಗಿದ್ದು, ರೌಡಿಸಂನಲ್ಲಿ ಗುರುತಿಸಿಕೊಳ್ಳಲು ಹಾಗೂ ರಿಯಲ್ ಎಸ್ಟೇಟಿನಲ್ಲಿ ಹವಾ ಸೃಷ್ಟಿಸುವ ಸಲುವಾಗಿ ಕೊಲೆ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಶಿವಕುಮಾರ್ ತಿಳಿಸಿದ್ದಾರೆ.

ಜುಲೈ 1 ರಂದು ಜಯಂತ್ ನನ್ನು ಕಿಡ್ನಾಪ್ ಮಾಡಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ಶೆಟ್ಟಹಳ್ಳಿ ಬಳಿಯ ಲೇಔಟ್ ನಲ್ಲಿ ಈ ಹತ್ಯೆ ಮಾಡಲಾಗಿದ್ದು, ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಗೆರಟಿಗನಬೆಲೆಯ ನೀಲಗಿರಿ ತೋಪಿನಲ್ಲಿ ಜಯಂತ್ ಮೃತ ದೇಹವನ್ನು ಬಿಸಾಕಿ ಹೋಗಿದ್ದರು.

ಇದೇ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳಾದ ಲೋಕೇಶ್ ಹಾಗೂ ಪ್ರವೀಣ್ ನನ್ನು ಕೆಲದಿನಗಳ ಹಿಂದಷ್ಟೇ ಬಂಧಿಸಿಲಾಗಿದೆ. ಈ ಪ್ರಕರಣದಲ್ಲಿ ಇನ್ನು ಐವರು ಆರೋಪಿಗಳು ತಲೆ ಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *