ಆ್ಯಸಿಡ್ ಸಂತ್ರಸ್ತೆಯ ಸರ್ಜರಿಗೆ ನೆರವಾದ ಪೊಲೀಸರು

Public TV
1 Min Read

ಬೆಂಗಳೂರು: ಇತ್ತೀಚೆಗೆ ಆ್ಯಸಿಡ್ ದಾಳಿಗೆ ಒಳಗಾಗಿದ್ದ ಯುವತಿಗೆ ರಕ್ತದ ಅವಶ್ಯಕತೆ ಇದ್ದು, ಸಂತ್ರಸ್ತೆಗೆ ರಕ್ತ ದಾನ ಮಾಡುವ ಮೂಲಕ ಪೊಲೀಸರು ಮಾನವೀಯತೆ ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಏಪ್ರಿಲ್ 28ರಂದು ಸುಂಕದಕಟ್ಟೆಯಲ್ಲಿ ಆ್ಯಸಿಡ್ ದಾಳಿಗೆ ಒಳಗಾಗಿದ್ದ ಯುವತಿ ಸರ್ಜರಿಗೆ ಒಳಗಾಗಿದ್ದು, ರಕ್ತದ ಅವಶ್ಯಕತೆ ಇತ್ತು. ಹೀಗಾಗಿ ನಗರದ ಕಾಮಾಕ್ಷಿಪಾಳ್ಯದ ಇನ್ಸ್ಪೆಕ್ಟರ್ ಪ್ರಶಾಂತ್ ಸೇರಿದಂತೆ ಐವರು ಸಿಬ್ಬಂದಿ ರಕ್ತದಾನ ಮಾಡಿದ್ದಾರೆ. ಇದನ್ನೂ ಓದಿ: ಪಾಸಿಟಿವಿಟಿ ರೇಟ್ ಶೇ.3.47ಕ್ಕೆ ಏರಿಕೆ – ಬೆಂಗ್ಳೂರಲ್ಲಿ 791 ಕೇಸ್

ಪೊಲೀಸರು 5 ಯುನಿಟ್ ರಕ್ತದಾನ ಮಾಡಿದ್ದು, ಸಂತ್ರಸ್ತ ಯುವತಿ ಸದ್ಯ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಮೊದಲ ದಿನ ಸಿಇಟಿ ಪರೀಕ್ಷೆ ಸುಗಮ: ಅಶ್ವಥ್ ನಾರಾಯಣ

Live Tv

Share This Article
Leave a Comment

Leave a Reply

Your email address will not be published. Required fields are marked *