ದೊಣ್ಣೆಗಳಿಂದ ಥಳಿಸಿ ಹೆಡ್ ಕಾನ್‍ಸ್ಟೇಬಲ್‍ನ ಬರ್ಬರ ಹತ್ಯೆ

Public TV
1 Min Read

ಜೈಪುರ: ಪೊಲೀಸ್ ಹೆಡ್ ಕಾನ್‍ಸ್ಟೇಬಲ್‍ನನ್ನು ಜನರ ಗುಂಪೊಂದು ದೊಣ್ಣೆಗಳಿಂದ ಥಳಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ರಾಜ್ಸಾಮಂಡ್ ಜಿಲ್ಲೆಯಲ್ಲಿ ನಡೆದಿದೆ.

ಕುನ್ವಾರಿಯಾ ನಿವಾಸಿ ಅಬ್ದುಲ್ ಗಣಿ(48) ಮೃತ ಹೆಡ್ ಕಾನ್‍ಸ್ಟೇಬಲ್. ಆಸ್ತಿ ವಿವಾದದ ಬಗ್ಗೆ ತನಿಖೆ ಮುಗಿಸಿಕೊಂಡು ವಾಪಸ್ ಹೋಗುತ್ತಿದ್ದಾಗ ಅನೇಕರು ಬೈಕ್‍ನಲ್ಲಿ ಬಂದು ಏಕಾಏಕಿ ದೊಣ್ಣೆಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಕಾನ್‍ಸ್ಟೇಬಲ್‍ಗೆ ಗಂಭೀರವಾಗಿ ಗಾಯಗಳಾಗಿದ್ದು, ತಕ್ಷಣ ಅವರನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು.

ತೀವ್ರವಾಗಿ ರಸ್ತಸ್ರಾವವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಅಬ್ದುಲ್ ಗಣಿ ಮೃತಪಟ್ಟಿದ್ದಾರೆ. ಈ ಘಟನೆ ರಾಜ್ಯದ ಪೊಲೀಸ್ ಇಲಾಖೆಗೆ ಆಘಾತವನ್ನುಂಟು ಮಾಡಿದ್ದು, ಮಾಹಿತಿ ತಿಳಿದು ದಾಳಿಕೋರರ ಬಗ್ಗೆ ತಿಳಿಯಲು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚೆಗೆ ರಾಜಸ್ಥಾನದಲ್ಲಿ ಜನಸಮೂಹದ ಹಿಂಸಾಚಾರದ ಘಟನೆಗಳು ಹೆಚ್ಚಾಗುತ್ತಿದ್ದು, ಕಳೆದ ವರ್ಷ ರಕ್ಬರ್ ಖಾನ್ (28) ದನ ಕಳ್ಳಸಾಗಣೆ ಮಾಡುತ್ತಿದ್ದಾನೆ ಎಂದು ಅನುಮಾನದ ಮೇರೆಗೆ ಜನಸಮೂಹ ಥಳಿಸಿದ್ದತ್ತು. ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಆದರೆ ತೀವ್ರವಾಗಿ ಗಾಯಗೊಂಡಿದ್ದ ಪರಿಣಾಮ ಆತ ಮೃತಪಟ್ಟಿದ್ದನು.

Share This Article
Leave a Comment

Leave a Reply

Your email address will not be published. Required fields are marked *