ಲಾರಿಗೆ ಬೈಕ್ ಡಿಕ್ಕಿ – ಕರ್ತವ್ಯ ನಿರತ ಪೊಲೀಸ್ ಪೇದೆ ಸ್ಥಳದಲ್ಲೇ ಸಾವು

Public TV
0 Min Read

ಗದಗ: ಕರ್ತವ್ಯದಲ್ಲಿದ್ದ ವೇಳೆ ರಸ್ತೆ ಅಪಘಾತದಲ್ಲಿ ಸಂಭವಿಸಿ ಪೊಲೀಸ್ ಪೇದೆಯೊಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಹೊಸಡಂಬಳ ಬಳಿ ನಡೆದಿದೆ.

ಪೊಲೀಸ್ ಪೇದೆ ಶಿವಪ್ರಕಾಶ ಲೂಟಿಮಠ(31) ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಪೇದೆಯು ಗದಗದಿಂದ ಮುಂಡರಗಿಗೆ ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಶಿವಪ್ರಕಾಶ್ ಗದಗ ಇಂಟಲಿಜೆನ್ಸ್ ಪೊಲೀಸ್ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಹೊಸಡಂಬಳ ಬಳಿ ರಸ್ತೆಯಲ್ಲಿ ಬೈಕ್‍ನಲ್ಲಿ ಬರುತ್ತಿದ್ದ ಪೇದೆ ಹಿಂಬದಿಯಿಂದ ಲಾರಿಯೊಂದಕ್ಕೆ ಡಿಕ್ಕಿಹೊಡೆದಿದ್ದಾರೆ.

ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಪೇದೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *