ಮರಳು ತುಂಬಿದ್ದ ಟ್ರ್ಯಾಕ್ಟರ್, ಬೈಕ್‍ಗೆ ಡಿಕ್ಕಿ- ಗೃಹ ಪ್ರವೇಶದ ಆಮಂತ್ರಣ ಕೊಡಲು ಹೋಗುತ್ತಿದ್ದ ಪೇದೆ ಸಾವು!

Public TV
0 Min Read

ರಾಮನಗರ: ಮರಳು ತುಂಬಿದ್ದ ಟ್ರ್ಯಾಕ್ಟರ್- ಬೈಕ್ ಗೆ ಡಿಕ್ಕಿಯಾಗಿ ಪೊಲೀಸ್ ಪೇದೆಯೊಬ್ಬರು ಸಾವನ್ನಪ್ಪಿದ್ದ ಘಟನೆ ಚನ್ನಪಟ್ಟಣ ತಾಲೂಕಿನ ಅಂಬಾಡಹಳ್ಳಿ ಗ್ರಾಮದ ಬಳಿ ನಡೆದಿದೆ.

ನಾಗರಾಜ್(40) ಮೃತ ಪೇದೆ. ನಾಗರಾಜ್ ಹಾಗೂ ಪುತ್ರಿ ತಮ್ಮ ಮನೆಯ ಗೃಹ ಪ್ರವೇಶದ ಆಮಂತ್ರಣ ಪತ್ರಿಕೆ ಕೊಡಲು ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಘಟನೆಯಲ್ಲಿ ಮೃತ ನಾಗರಾಜು ಪುತ್ರಿಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಮೃತ ಪೇದೆ ಚನ್ನಪಟ್ಟಣ ತಾಲೂಕಿನ ಸಾದರಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಬೆಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಈ ಬಗ್ಗೆ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *