ಪರಿಷೆಯಲ್ಲಿ ಕಡ್ಲೆಕಾಯಿ ಭಿಕ್ಷೆ ಬೇಡುತ್ತಿದ್ದ ಪೊಲೀಸ್ ಪೇದೆ ಅಮಾನತು

Public TV
1 Min Read

ಬೆಂಗಳೂರು: ಬಸವನಗುಡಿಯ ಕಡಲೇಕಾಯಿ ಪರಿಷೆಯಲ್ಲಿ ವ್ಯಾಪಾರಿಗಳಿಂದ ಅಕ್ರಮವಾಗಿ ಕಡ್ಲೆಕಾಯಿಯನ್ನು ಸಂಗ್ರಹಿಸುತ್ತಿದ್ದ ಪೇದೆಯನ್ನು ಅಮಾನತು ಮಾಡಲಾಗಿದೆ.

ಸಿಎಆರ್ ಪೇದೆ ಎಸ್ ಪಿ ಮಂಡಕ್ಕಿ ಅಮಾನತುಗೊಂಡಿರುವ ಪೇದೆ. ಎಸ್ ಪಿ ಮಂಡಕ್ಕಿ ಅವರನ್ನು ಸಿಎಆರ್ ಡಿಸಿಪಿ ತಿಮ್ಮಣ್ಣನವರ್ ಅಮಾನತು ಮಾಡಿರುವುದಾಗಿ ಆದೇಶ ಹೊರಡಿಸಿದ್ದಾರೆ.

ಸೋಮವಾರದಿಂದ ಆರಂಭವಾಗಿರುವ ನಗರದ ದೊಡ್ಡ ಜಾತ್ರೆ ಬಸವನಗುಡಿಯ ಕಡ್ಲೆಕಾಯಿ ಪರಿಷೆ ವೇಳೆ ಪೊಲೀಸ್ ಪೇದೆ ಸಣ್ಣದಾದ ಚೀಲವೊಂದನ್ನು ಹಿಡಿದುಕೊಂಡು ಕಡ್ಲೆಕಾಯಿ ಬೇಡುತ್ತಿರುವುದನ್ನು ನೆರೆದವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಜನರು ಸಾಮಾಜಿಕ ಜಾಲತಾಣದಲ್ಲಿ ಪೊಲೀಸ್ ಪೇದೆಯ ವಿರುದ್ಧ ಕಿಡಿ ಕಾರಿ ಕ್ರಮಕ್ಕೆ ಆಗ್ರಹಿಸಿದ್ದರು.

https://youtu.be/BDrCNJk5Fho

Share This Article
Leave a Comment

Leave a Reply

Your email address will not be published. Required fields are marked *