ಕುಡಿದ ಮತ್ತಿನಲ್ಲಿ ಅಪಘಾತ – ಇನ್ಸ್‌ಪೆಕ್ಟರ್ ದಂಪತಿಯಿಂದ ಕಿರಿಕ್

Public TV
1 Min Read

ಬೆಂಗಳೂರು: ಇನ್ಸ್‌ಪೆಕ್ಟರ್ ದಂಪತಿ ಕುಡಿದ ಮತ್ತಿನಲ್ಲಿ ಅಪಘಾತ ಮಾಡಿ ಭಾರೀ ಹೈಡ್ರಾಮಾ ಸೃಷ್ಟಿಸಿರುವ ಘಟನೆ ನಗರದ ಚಾಮರಾಜಪೇಟೆ ಠಾಣೆ ಎದುರು ನಡೆದಿದೆ.

ಸಿಎಆರ್ ಇನ್ಸ್‌ಪೆಕ್ಟರ್ ಸಂಜೀವ್ ಮತ್ತು ಪತ್ನಿ ಉಷಾ ಕುಡಿದ ಮತ್ತಿನಲ್ಲಿ ತಡರಾತ್ರಿ ಜಾಲಿ ರೈಡ್‍ಗೆ ಬಂದಿದ್ದರು. ಈ ವೇಳೆ ಕಾರು ಚಲಾಯಿಸಿ ಉಷಾ ಅಪಘಾತ ಮಾಡಿದ್ದಾರೆ. ಚಾಮರಾಜಪೇಟೆಯ 6ನೇ ಮುಖ್ಯರಸ್ತೆಯಲ್ಲಿ ಕಾರಿಗೆ ಡಿಕ್ಕಿ ಹೊಡೆದು ಕಿರಿಕ್ ಮಾಡಿದ್ದಾರೆ. ಅಲ್ಲದೇ ಗಲಾಟೆ ಮಾಡಿದ್ದ ದಂಪತಿ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಚಾಮರಾಜಪೇಟೆಯಲ್ಲಿ ದೂರು-ಪ್ರತಿದೂರು ದಾಖಲಾಗಿದೆ. ಇದನ್ನೂ ಓದಿ: ವಾಹನ ತಪಾಸಣೆ ವೇಳೆ ಪೊಲೀಸರಿಗೆ ಕುಡುಕನ ಅವಾಜ್

ಬಳಿಕ ತಪಾಸಣೆ ನಡೆಸಿದ ಪೊಲೀಸರಿಗೆ ಇಬ್ಬರೂ ಕುಡಿದಿರುವುದು ಪತ್ತೆ ಆಗಿದೆ. ಇನ್ಸ್‌ಪೆಕ್ಟರ್ ಸಂಜೀವ್, ಉಷಾ ಮದ್ಯಸೇವನೆ ದೃಢ ಹಿನ್ನೆಲೆ ಚಿಕ್ಕಪೇಟೆ ಸಂಚಾರಿ ಠಾಣೆಯಲ್ಲಿ ಡ್ರಂಕ್ ಅಂಡ್ ಡ್ರೈವ್ ಕೇಸ್ ದಾಖಲಾಗಿದೆ. ಇದನ್ನೂ ಓದಿ:  ಇಂಧನ ಸೋರಿಕೆ – ಆರ್ಟೆಮಿಸ್ ಮೂನ್ ಮಿಷನ್ ರಾಕೆಟ್ ಲಾಂಚಿಂಗ್ ಮತ್ತೆ ಸ್ಥಗಿತ

ಇದೇ ರೀತಿ ಶುಕ್ರವಾರ ತಡರಾತ್ರಿ ಹಲಸೂರ್ ಪೊಲೀಸ್ ಠಾಣೆ ಮುಂದೆ ಟ್ರಾಫಿಕ್ ಸಿಬ್ಬಂದಿ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಕುಡಿದು ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ವ್ಯಕ್ತಿಗೆ ಟ್ರಾಫಿಕ್ ಸಿಬ್ಬಂದಿ ಗಾಡಿ ಸೈಡಿಗೆ ಹಾಕುವಂತೆ ಹೇಳಿದ್ದಾರೆ. ಅಷ್ಟಕ್ಕೇ ಆತ ಟ್ರಾಫಿಕ್ ಸಿಬ್ಬಂದಿಯನ್ನು ನಾಯಿಗೆ ಹೋಲಿಸಿ ಅವಾಚ್ಯವಾಗಿ ನಿಂದಿಸಿದ್ದನು. ಬಳಿಕ ಆತನಿಂದ ದಂಡ ಕಟ್ಟಿಸಿಕೊಂಡು ಪೊಲೀಸರು ಬಿಟ್ಟು ಕಳಿಸಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *