ಪೊಲೀಸರಿಂದ ಸ್ಥಳ ಮಹಜರು- ಸೋನು ಗೌಡ ಇದ್ದ ಕಾರಿಗೆ ಜನರ ಮುತ್ತಿಗೆ

Public TV
1 Min Read

ರಾಯಚೂರು: ಕಾನೂನು ಬಾಹಿರವಾಗಿ ಮಗುವನ್ನ ದತ್ತು ತೆಗೆದುಕೊಂಡು ಪೊಲೀಸ್ ವಶದಲ್ಲಿರುವ ಸೋನು ಶ್ರೀನಿವಾಸಗೌಡರನ್ನು (Sonu Srinivas Gowda) ಬೆಂಗಳೂರಿನ ಬ್ಯಾಡರಳ್ಳಿ ಪೊಲೀಸರು ಇಂದು (ಮಾ.24) ರಾಯಚೂರಿನ ಮಸ್ಕಿ ತಾಲೂಕಿನ ಕಾಚಾಪುರಕ್ಕೆ ಕರೆದುಕೊಂಡು ಬಂದ ಸ್ಥಳ ಮಹಜರು ಮಾಡಿದ್ದಾರೆ. ಬಾಲಕಿ ಚಿಕ್ಕಪ್ಪನ ಮನೆಗೆ ಬಂದ ಪೊಲೀಸರು ಕೆಲವೇ ಕ್ಷಣದಲ್ಲಿ ಮಾಹಿತಿ ಕಲೆಹಾಕಿ ಅವಸರದಲ್ಲಿ ಗ್ರಾಮದಿಂದ ಹೊರನಡೆದರು. ಈ ವೇಳೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಸೋನು ಗೌಡ ಇದ್ದ ಕಾರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ್ದಾರೆ.

ಸ್ಥಳ ಮಹಜರು ಮಾಡಲು ಪೋಲಿಸರು ಭೇಟಿ ನೀಡಿದ ಬಳಿಕ ಸೋನು ಗೌಡ ಜೊತೆ ಮಾತನಾಡಬೇಕು ಅಂತ ಗ್ರಾಮಸ್ಥರು ಗಲಾಟೆ ಮಾಡಿದರು. ಪೊಲೀಸ್ ಕಾರಿಗೆ ಮುತ್ತಿಗೆ ಹಾಕಿ ಸೋನು ಗೌಡರನ್ನು ನೋಡಲು ನೂಕುನುಗ್ಗಲು ಮಾಡಿದರು. ಗ್ರಾಮಸ್ಥರು ಹಾಗೂ ಬಾಲಕಿ ಸಂಬಂಧಿಕರಿಂದ ಮಾಹಿತಿ ಪಡೆದ ಪೊಲೀಸರು ಸುಮಾರು ಇಪ್ಪತ್ತು ನಿಮಿಷಗಳಲ್ಲಿ ಸ್ಥಳ ಮಹಜರು ಮುಗಿಸಿ ವಾಪಸ್ ತೆರಳಿದ್ದಾರೆ. ಇದನ್ನೂ ಓದಿ:ಸಕ್ಸಸ್‌ಗಾಗಿ ದಿಟ್ಟ ನಿರ್ಧಾರ ಕೈಗೊಂಡ ಶ್ರೀಲೀಲಾ

ಈ ಮಧ್ಯೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿರುವ ಮಗುವಿನ ಚಿಕ್ಕಪ್ಪ ಸೋನುಗೌಡ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗುವನ್ನ ನಾವು ದತ್ತು ನೀಡಿಲ್ಲ, ಆಕೆ ನಮಗೆ ಯಾವುದೇ ಹಣದ ಸಹಾಯ ಮಾಡಿಲ್ಲ. ನಮ್ಮ ಮಗಳನ್ನು ಓದಿಸುತ್ತೇನೆ. ಚೆನ್ನಾಗಿ ಸಾಕುತ್ತೇನೆ ಎಂದು ಹೇಳಿ ಕರೆದುಕೊಂಡು ಹೋಗಿದ್ದಾರೆ. ಈಗ ದತ್ತು ತೆಗೆದುಕೊಂಡಿದ್ದೇನೆ ಅಂತ ಹೇಳಿರುವುದು ಸರಿಯಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದರು.

Share This Article