ಕೊಪ್ಪಳ: ಈ ಹಿಂದೆ ಗಂಗಾವತಿಯಲ್ಲಿ ನಡೆದಿದ್ದ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಅಲೆಯುತ್ತಿರುವ ವ್ಯಕ್ತಿಗಳಿಗೆ ಗಡಿಪಾರು ಬೆದರಿಕೆ ಪತ್ರ ರವಾನೆಯಾಗುತ್ತಿದೆ. ಇದರಿಂದ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಯುವಕರಲ್ಲಿ ಆತಂಕ ಮನೆ ಮಾಡಿದ್ದು ಸಿಎಂ ಬಳಿ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದರೂ ತಮ್ಮ ಮನೆಗೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಗಡಿಪಾರು ಮಾಡುವ ಬೆದರಿಕೆ ನೋಟಿಸ್ ತಮ್ಮ ವಿಳಾಸಕ್ಕೆ ಬಂದು ಕೈಸೇರುತ್ತಿರುವುದರಿಂದ ರಾಜ್ಯದ ಬಿಜೆಪಿ ಸರ್ಕಾರದ ನಡೆಯ ಬಗ್ಗೆ ಹಿಂದೂ ಸಂಘಟನೆಯ ಕಾರ್ಯಕರ್ತರಲ್ಲಿ ಆಕ್ರೋಶ ಭುಗಿಲೆದ್ದಿದೆ.
ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಂದಿರುವ ಅರುಣಾಂಗು ಗಿರಿ ಅವರು ಗಂಗಾವತಿ ಠಾಣೆ ಸೇರಿದಂತೆ ಜಿಲ್ಲೆಯಲ್ಲಿ ಜೂಜಾಟ, ಇಸ್ಪೀಟ್, ಮಟ್ಕಾ ಸೇರಿದಂತೆ ಇನ್ನಿತರ ಕಾನೂನು ಬಾಹಿರ ಚಟುವಟಿಕೆ ನಡೆಸುವ ವ್ಯಕ್ತಿಗಳನ್ನು ಗುರುತಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಎರಡು ಮೂರು ಜನರನ್ನು ಗಡಿಪಾರು ಮಾಡಿ ಆದೇಶ ಮಾಡಿದ್ದಾರೆ.
ಇದೀಗ ಕಳೆದ 2016ರಲ್ಲಿ ಹನುಮಮಾಲೆ ಮತ್ತು ಈದ್ ಮಿಲಾದ್ ಸಂದರ್ಭದಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಹಿಂದೂ ಮತ್ತು ಮುಸ್ಲಿಂ ಯುವಕರು ಸೇರಿದಂತೆ ಬಿಜೆಪಿ ಮುಖಂಡರು ಮತ್ತು ನೂರಾರು ಜನ ಹಿಂದೂಪರ ಸಂಘಟನೆ ಕಾರ್ಯಕರ್ತರ ವಿರುದ್ಧ ವಿವಿಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸಿಲುಕಿರುವ ಹಿಂದೂ ಮತ್ತು ಮುಸ್ಲಿಂ ಯುವಕರು ಸೌಹಾರ್ದತೆಯಿಂದ ಪ್ರಕರಣದಿಂದ ಹೊರಬರಲು ಸಾಕಷ್ಟು ಹರ ಸಾಹಸ ಮಾಡುತ್ತಿದ್ದಾರೆ. ಇನ್ನೂ ಕೆಲವರು ನ್ಯಾಯಾಲಯಕ್ಕೆ ಅಲೆದಾಡುತ್ತಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ನಡೆದ ಗಲಭೆಯಲ್ಲಿ ಎರಡು ಗುಂಪಿನ ಯುವಕರು ಮತ್ತು ಕೆಲ ಹಿಂದೂ ಸಂಘಟನೆಯ ಮುಖಂಡರು, ಬಿಜೆಪಿ ಮುಖಂಡರು, ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಅಂತ್ಯಗೊಳಿಸಲು ರಾಜ್ಯದ ಬಿಜೆಪಿ ಸರ್ಕಾರ ಕಾರ್ಯಕರ್ತರಿಗೆ ಮನವರಿಕೆ ಮಾಡುತ್ತಿದೆ. ತಮ್ಮ ಮೇಲೆ ಇರುವ ಪ್ರಕರಣದ ಖುಲಾಸೆಯಾಗುತ್ತಿದೆ ಎಂದು ಸಂತಸ ಪಡುತ್ತಿರುವ ಯುವಕರಿಗೆ ಈಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೋಟಿಸ್ ಬಂದಿದೆ. ಇದನ್ನೂ ಓದಿ: ಕಿಟಕಿಯಿಲ್ಲದ, ಉಸಿರಾಡಲು ಕಷ್ಟಕರವಾದ ಕೋಣೆಯಲ್ಲಿ ಇರಿಸಿದ್ದಾರೆ: ED ವಿರುದ್ಧ ಕೋರ್ಟ್ಗೆ ರಾವತ್ ದೂರು
ಮತ್ತೆ ನೋಟಿಸ್ ಜಾರಿ: ಈಗ ಜಿಲ್ಲೆಗೆ ಆಗಮಿಸಿರುವ ನೂತನ ಎಸ್ಪಿ ಅರುಣಾಂಗು ಗಿರಿ ಅವರು ಘಟನೆಯಲ್ಲಿ ಭಾಗಿಯಾದ ವ್ಯಕ್ತಿಗಳ ಮನೆಗೆ ಗಡಿಪಾರು ಮಾಡುವುದರ ಬಗ್ಗೆ ಆದೇಶದ ಪ್ರತಿಯನ್ನು ಅಂಚೆ ಮೂಲಕ ರವಾನಿಸುತ್ತಿದ್ದಾರೆ. ಇದರಿಂದಾಗಿ ನೂರಾರು ಜನ ಯುವಕರು ಆತಂಕಕ್ಕಿಡಾಗಿದ್ದಾರೆ. ಜೊತೆಗೆ ಇದೇ ತಿಂಗಳು 31 ರಂದು ಗಣೇಶೋತ್ಸವ ಬರುತ್ತಿದ್ದು, ಎಸ್ಪಿ ನಮ್ಮನ್ನು ಉದ್ದೇಶಪೂರ್ವಕವಾಗಿ ಗುರಿ ಮಾಡುತ್ತಿದ್ದಾರೆ ಎಂಬ ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಎಸ್ಪಿ ಅವರ ನೋಟಿಸ್ ಪ್ರತಿಯನ್ನು ಹಿಡಿದು ಹಿಂದುಪರ ಸಂಘಟನೆ ಮತ್ತು ಬಿಜೆಪಿ ಕಾರ್ಯಕರ್ತರು ಶಾಸಕ, ಸಂಸದರ ಮುಂದೆ ಅಳಲು ತೊಡಿಕೊಳ್ಳುತ್ತಿದ್ದು, ಇತ್ತೀಚಿಗೆ ಅಂಜನಾದ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಅವರ ಮುಂದೆಯೂ ಪೆÇಲೀಸ್ ಇಲಾಖೆಯ ನಡೆಯ ಬಗ್ಗೆ ದೂರು ನೀಡಿದ್ದಾರೆ. ಬಿಜೆಪಿ ಸರ್ಕಾರ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಕುರಿತು ಸ್ಪಷ್ಟನೆ ನೀಡಬೇಕಿದೆ. ಇದನ್ನೂ ಓದಿ: ತೈವಾನ್ ಆಯ್ತು ಈಗ ಜಪಾನಿನ ಮೇಲೂ ಚೀನಾ ಕ್ಷಿಪಣಿ ದಾಳಿ