ಸ್ಯಾಂಟ್ರೋ ರವಿ ವಿರುದ್ಧ 1995 ರಿಂದಲೂ ಕೇಸ್‍ಗಳನ್ನು ಜಾಲಾಡ್ತಿರೋ ಪೊಲೀಸರು

Public TV
2 Min Read

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ (BJP Government) ಕ್ಕೆ ಭಾರೀ ಮುಜುಗರ ತಂದಿದ್ದ ಜೊತೆಗೆ ತಲೆನೋವೂ ಆಗಿದ್ದ ಸ್ಯಾಂಟ್ರೋ ರವಿ (Santro Ravi) ಕೊನೆಗೂ ಪೊಲೀಸರ ಖೆಡ್ಡಾಕ್ಕೆ ಬಿದ್ದಿದ್ದಾನೆ. ಬಂಧಿತ ಸ್ಯಾಂಟ್ರೋ ರವಿಯನ್ನು ಪೊಲೀಸರು ದೂರದ ಗುಜರಾತ್‍ನಿಂದ ರಾಜ್ಯಕ್ಕೆ ಕರೆತಂದಿದ್ದಾರೆ. ಸ್ಯಾಂಟ್ರೋ ರವಿ ಪ್ರಕರಣವನ್ನು ರಾಜ್ಯ ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದ್ದು, ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲು ಗೃಹ ಇಲಾಖೆಗೆ ಸೂಚಿಸಲಾಗಿದೆ. ಸ್ಯಾಂಟ್ರೋ ರವಿಯಿಂದಾಗಿ ಸರ್ಕಾರಕ್ಕೂ, ವೈಯಕ್ತಿಕವಾಗಿ ತಮಗೂ ಮುಜುಗರ ಆಗಿರೋದ್ರಿಂದ ಖುದ್ದು ಸಿಎಂ ಬೊಮ್ಮಾಯಿ (Basavaraj Bommai) ಸ್ಯಾಂಟ್ರೋ ರವಿ ಪ್ರಕರಣದ ತನಿಖೆಯಲ್ಲಿ ಆಸಕ್ತಿ ವಹಿಸಿದ್ದಾರೆ.

ಸ್ಯಾಂಟ್ರೋ ರವಿ ಮೇಲೆ 1995 ರಿಂದಲೂ ವಿವಿಧ ಕ್ರಿಮಿನಲ್ ಕೇಸ್ ಗಳಿವೆ ಎನ್ನಲಾಗಿದೆ. ಮೈಸೂರು, ಬೆಂಗಳೂರುಗಳಲ್ಲೇ ಹೆಚ್ಚಿನ ಕೇಸ್‍ಗಳು ದಾಖಲಾಗಿವೆ. ಹೀಗಾಗಿ ಸ್ಯಾಂಟ್ರೋ ರವಿ ವಿರುದ್ಧ ಕಳೆದ 20 ವರ್ಷಗಳಿಗೂ ಹೆಚ್ಚು ಕಾಲದಿಂದಲೂ ಆತನ ಮೇಲಿರುವ ಎಲ್ಲ ಕೇಸ್‍ಗಳು ಹಾಗೂ ಆತನಿಗಿರುವ ರಾಜಕಾರಣಿಗಳ ಸಂಪರ್ಕದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಪೊಲೀಸರಿಗೆ ಸಿಎಂ ಬೊಮ್ಮಾಯಿ ತಾಕೀತು ಮಾಡಿದ್ದಾರೆ. ಇದನ್ನೂ ಓದಿ: ಎಲ್ಲರ ಕಣ್ತಪ್ಪಿಸಿ ಸ್ಯಾಂಟ್ರೋ ರವಿ ಶಿಫ್ಟ್ – ವಿಐಪಿ ಗೇಟ್‍ನಲ್ಲಿ ಕರೆದೊಯ್ದ ಬಗ್ಗೆ ಹೆಚ್‍ಡಿಕೆ ಕಿಡಿ

ಸ್ಯಾಂಟ್ರೊ ರವಿ ಏನೇನು ಮಾಡಿದ್ದಾನೆ, ಯಾವ ಯಾವ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ. ಕಳೆದ 20 ವರ್ಷಗಳಲ್ಲಿ ಯಾರ್ಯಾರ ಸಂಪರ್ಕದಲ್ಲಿದ್ದಾನೆ. ಯಾವ್ಯಾವ ಸರ್ಕಾರಗಳ ಅವಧಿಯಲ್ಲಿ ಏನೇನು ಡೀಲ್ ಗಳನ್ನು ನಡೆಸಿದ್ದಾನೆ, ಯಾರ್ಯಾರ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ದಾನೆ, ವರ್ಗಾವಣೆ ಮಾಡಿಸಿಕೊಂಡಿದ್ದಾನೆ. ಈ ಬಗ್ಗೆ ನಿಖರವಾಗಿ, ಕರಾರುವಕ್ಕಾಗಿ ತನಿಖೆ ಮಾಡುವಂತೆ ಎಂದು ಪೊಲೀಸರಿಗೆ ಸಿಎಂ ಸೂಚಿಸಿದ್ದದಾರೆ. ಒಟ್ಟಿನಲ್ಲಿ ಸ್ಯಾಂಟ್ರೋ ರವಿ ವಿರುದ್ಧ ಇರುವ ಪ್ರಕರಣಗಳನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ.

ಒಟ್ಟಿನಲ್ಲಿ ಸ್ಯಾಂಟ್ರೋ ರವಿಯ ವಿರುದ್ಧ ಸಮಗ್ರ ತನಿಖೆ ನಡೆಸಿ ಪುರಾವೆಗಳನ್ನು ಸಂಗ್ರಹಿಸುವ ಕೆಲಸ ಮಾಡುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ. ಸ್ಯಾಂಟ್ರೋ ರವಿಯ ಸುಳಿಯಲ್ಲಿ ಯಾರಿದ್ದಾರೆ..? ಯಾರಿಲ್ಲ..? ಯಾರು ಸಿಕ್ಕಿ ಹಾಕ್ಕೋಳ್ತಾರೆ..?, ಯಾರು ಬಚಾವ್ ಆಗ್ತಾರೆ..? ಯಾರ್ಯಾರ ಬಣ್ಣ ಬಣ್ಣ ಬಯಲಾಗುತ್ತೆ..? ಅನ್ನೋದು ತನಿಖೆ ನಂತರವೇ ಗೊತ್ತಾಗುತ್ತೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *