ಸಚಿವ ಸಾರಾ ಮಹೇಶ್ ಕಾರು ತಡೆದಿದ್ದ ಮುಖ್ಯಪೇದೆ ಅಮಾನತು

Public TV
1 Min Read

ಮೈಸೂರು: ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾರಾ ಮಹೇಶ್ ಅವರ ಕಾರನ್ನು ತಡೆದಿದ್ದ ಮುಖ್ಯ ಪೇದೆಯನ್ನು ಅಮಾನತುಗೊಳಿಸಲಾಗಿದೆ.

ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಮುಖ್ಯ ಪೇದೆ ವೆಂಕಟೇಶ್ ಅಮಾನತುಗೊಂಡಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ವಿಜಯ್‍ಶಂಕರ್ ನಾಮಪತ್ರ ಸಲ್ಲಿಕೆ ವೇಳೆ ಮೂರು ಕಾರುಗಳಿಗೆ ಅವಕಾಶವಿದ್ದರೂ, ಸಚಿವರ ಕಾರಿಗೆ ಮುಖ್ಯಪೇದೆ ತಡೆ ಹಾಕಿದ್ದರು ಎಂದು ಆರೋಪಿಸಲಾಗಿದೆ. ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿಯ ದೇವರಾಜು ಅರಸು ಜಂಕ್ಷನ್ ಬಳಿಯೇ ಕಾರು ತಡೆದಿದ್ದ ವೆಂಕಟೇಶ್ ಅವರನ್ನು ಇದೀಗ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.

ಸಾರಾಮಹೇಶ್ ಸ್ಪಷ್ಟನೆ:
ಈ ಕುರಿತು ಪ್ರತಿಕ್ರಿಯಿಸಿದ ಸಚಿವರು, ಮುಖ್ಯ ಪೇದೆಯೊಬ್ಬರು ಅನುಚಿತವಾಗಿ ವರ್ತಿಸಿದ್ದು ನಿಜ. ನಾಮಪತ್ರ ಸಲ್ಲಿಕೆ ವೇಳೆ ಜಿಲ್ಲಾಧಿಕಾರಿ ಕಚೇರಿ ಸುತ್ತ 100 ಮೀಟರ್ ನಿಷೇಧಾಜ್ಞೆ ಇತ್ತು. ಆದರೆ ಅವರು ನನ್ನ ಕಾರನ್ನು ಅರ್ಧ ಕಿಲೋ ಮೀಟರ್ ಹಿಂದೆ ತಡೆದಿದ್ದರು. ಮುಖ್ಯ ಪೇದೆಗೆ ಕಾನೂನಿನ ಅರಿವಿರಲಿಲ್ಲ. ಈ ಬಗ್ಗೆ ನನ್ನ ಜೊತೆಯಿದ್ದವರು ತಿಳಿಸಿದರೂ ಅದನ್ನು ಒಪ್ಪಲು ಸಿದ್ಧರಿರಲಿಲ್ಲ. ಇದಾದ ನಂತರ ಹಿರಿಯ ಅಧಿಕಾರಿಗಳು ಬಂದು ಅವರಿಗೆ ತಿಳಿ ಹೇಳಿ ಕಾರನ್ನು ಬಿಟ್ಟರು. ಈ ಬಗ್ಗೆ ಪರಿಶೀಲನೆ ನಡೆಸಿ ಕರ್ತವ್ಯ ಲೋಪವೆಸಗಿದ ಮುಖ್ಯಪೇದೆಯನ್ನು ಅಮಾನತುಗೊಳಿಸಿರಬಹುದು. ಈ ಬಗ್ಗೆ ನಾನು ಯಾವುದೇ ದೂರು ನೀಡಿಲ್ಲ ಎಂದು ಸಾ.ರಾ ಮಹೇಶ್ ಸ್ಪಷ್ಟನೆ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *