ಬಳ್ಳಾರಿಯ ಸಮೀರ್ ನಿವಾಸಕ್ಕೆ ಪೊಲೀಸ್ ನೋಟಿಸ್‌ – ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ

Public TV
1 Min Read

ಬಳ್ಳಾರಿ/ಮಂಗಳೂರು: ಧರ್ಮಸ್ಥಳ ಠಾಣೆಯಲ್ಲಿ (Dharmasthala Police Station) ದಾಖಲಾಗಿರುವ ಸ್ವಯಂಪ್ರೇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್‌ ಸಮೀರ್‌ (Sameer MD) ಅವರ ಬಳ್ಳಾರಿ ನಿವಾಸಕ್ಕೆ ಧರ್ಮಸ್ಥಳದ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಮನೆಗೆ ಬೀಗ ಜಡಿದಿದ್ದ ಹಿನ್ನೆಲೆ ಬಂಡಿಹಟ್ಟಿ ಏರಿಯಾದಲ್ಲಿರುವ ಅವರ ಮನೆ ಗೋಡೆಗೆ ನೋಟಿಸ್‌ ಅಂಟಿಸಿದ್ದು, ನಾಳೆ (ಆ.24) ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ನಿನ್ನೆ ಸಂಜೆಯೇ ಧರ್ಮಸ್ಥಳ ಠಾಣೆ ಪೊಲೀಸರು ಮನೆಗೆ ನೋಟಿಸ್‌ ಅಂಟಿಸಿ ಹೋಗಿದ್ದಾರೆ. ಇದು ಈ ಪ್ರಕರಣದಲ್ಲಿ ಸಮೀರ್‌ಗೆ ಮೂರನೇ ನೋಟಿಸ್‌ ಆಗಿದೆ. ಇದನ್ನೂ ಓದಿ: ಧರ್ಮಸ್ಥಳಕ್ಕೆ ಹೋಗಲು ಭಯವಿದೆ – ಪೊಲೀಸರ ಮುಂದೆ ಹಲವು ಬೇಡಿಕೆ ಇಟ್ಟ ಸಮೀರ್‌

ಬೆಳ್ತಂಗಡಿ ಠಾಣೆಗೆ ಹಾಜರಾಗುವಂತೆ ಸೂಚನೆ
ಇನ್ನೂ ಧರ್ಮಸ್ಥಳಕ್ಕೆ ಹೋಗಲು ತನಗೆ ಜೀವ ಭಯವಿದೆ ಎಂದಿದ್ದ ಸಮೀರ್‌ ಸುರಕ್ಷತೆ ದೃಷ್ಟಿಯಿಂದ ಧರ್ಮಸ್ಥಳ ಠಾಣೆಗೆ ನಾನು ಬರಲಾರೆ ಎಂದಿದ್ದ. ಈ ಹಿನ್ನೆಲೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಹಾಜರಾಗಿ ವಿಚಾರಣೆ ಎದುರಿಸುವಂತೆ ನೋಟಿಸ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ನನಗೆ ಅನನ್ಯಾ ಭಟ್‌ ಅನ್ನೋ ಮಗಳೇ ಇರಲಿಲ್ಲ – ಉಲ್ಟಾ ಹೊಡೆದ ಸುಜಾತ ಭಟ್‌

ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇತ್ತೀಚೆಗಷ್ಟೇ ಬನ್ನೇರುಘಟ್ಟದಲ್ಲಿರುವ ಮನೆಯಲ್ಲೇ ಸಮೀರ್‌ನನ್ನ ವಶಕ್ಕೆ ಪಡೆಯಲು ತೆರಳಿದ್ದರು. ಬಳಿಕ ನಿರೀಕ್ಷಣಾ ಜಾಮೀನು ಪಡೆದಿದ್ದರು. ಇದನ್ನೂ ಓದಿ: Dharmasthala Case | ವಿಚಾರಣೆಗೆ ಹಾಜರಾಗುವಂತೆ ಸುಜಾತ ಭಟ್‌ಗೆ SIT ನೋಟಿಸ್

Share This Article