ನೀರಿನ ಹೊಂಡದಲ್ಲಿ ಸಿಲುಕಿದ್ದ ಶ್ವಾನವನ್ನು ಕಾಪಾಡಿ ಮಾನವೀಯತೆ ಮೆರೆದ ಪೊಲೀಸ್ ಅಧಿಕಾರಿ

Public TV
0 Min Read

ಮೈಸೂರು: ನಗರದ ಅರಮನೆ ಮೈದಾನದ ಆವರಣದಲ್ಲಿರುವ ನೀರಿನ ಹೊಂಡಕ್ಕೆ ಬಿದ್ದು, ಪರದಾಡುತ್ತಿದ್ದ ಶ್ವಾನವೊಂದನ್ನು ರಕ್ಷಿಸಲಾಗಿದೆ.

ಪೊಲೀಸ್ ಇಲಾಖೆಯ ಶ್ವಾನದಳದ ಎಎಸ್‍ಐ ಶಿವಾಜಿ ರಾವ್ ಅವರು ಹೊಂಡದಲ್ಲಿ ಬಿದ್ದು ಸಿಲುಕಿದ್ದ ಶ್ವಾನವನ್ನು ರಕ್ಷಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ನೀರು ಕುಡಿಯಲೆಂದು ಹೊಂಡಕ್ಕೆ ಇಳಿದಿದ್ದ ಶ್ವಾನ ಬಳಿಕ ಮೇಲೆ ಬರಲಾಗದೆ ಪರದಾಡುತ್ತಿತ್ತು. ಇದನ್ನ ಗಮನಿಸಿದ ಪೊಲೀಸ್ ಅಧಿಕಾರಿ ಸ್ಥಳಕ್ಕೆ ತೆರಳಿ ಶ್ವಾನವನ್ನು ಹೊಂಡದಿಂದ ಮೇಲಕ್ಕೆತ್ತಿದ್ದಾರೆ. ಹೊಂಡದಿಂದ ಪಾರಾದ ಶ್ವಾನ ಅಲ್ಲಿಂದ ಕಾಲ್ಕಿತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *