ಹಾಸನ ಜೈಲಿನಲ್ಲಿ ಗಾಂಜಾ, ಮೊಬೈಲ್ ಪತ್ತೆ ಪ್ರಕರಣ – ನಾಲ್ವರು ಅಧಿಕಾರಿಗಳ ಅಮಾನತು

Public TV
1 Min Read

ಹಾಸನ: ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು (Police) ದಾಳಿ ನಡೆಸಿ ಗಾಂಜಾ ಹಾಗೂ ಮೊಬೈಲ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಾಗೃಹದ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಜಿಲ್ಲಾ ಕಾರಾಗೃಹದ ಮೇಲೆ ಇತ್ತೀಚೆಗೆ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ಮೊಬೈಲ್, ಗಾಂಜಾ, ಸಿಗರೇಟ್, ಬಿಡಿ ಮತ್ತು ಮೊಬೈಲ್ ಚಾರ್ಜರ್‌ಗಳು ಪತ್ತೆಯಾಗಿದ್ದವು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ಕಾರಾಗೃಹ ಪೊಲೀಸ್ ಮಹಾನಿರ್ದೇಶಕರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಹಾಸನ  (Hassan) ಉಪಕಾರಾಗೃಹದ ಪೊಲೀಸ್ ಅಧೀಕ್ಷಕ ಸುರೇಶ್, ಜೈಲರ್ ಖುತುಬುದ್ದೀನ್ ದೇಸಾಯಿ, ಜಾದವ್ ಹಾಗೂ ಪಾಟೀಲ್ ಅಮಾನತಾದ ಅಧಿಕಾರಿಗಳಾಗಿದ್ದಾರೆ. ಇದನ್ನೂ ಓದಿ: ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರಿಂದ ರಾತ್ರೋ ರಾತ್ರಿ ದಾಳಿ – 17 ಮೊಬೈಲ್‌, ಗಾಂಜಾ, ಸಿಗರೇಟ್‌ ಸೀಜ್‌

ಸೆಲ್‍ನ ಒಳಗಿನಿಂದ ಖೈದಿಯೊಬ್ಬ ಜೈಲಿನನಲ್ಲಿ ನಡೆಯುತ್ತಿದ್ದ ಅವ್ಯವಹಾರವನ್ನು ವೀಡಿಯೋ ಮಾಡಿ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಮಾಡಿದ್ದ. ಈ ಹಿನ್ನಲೆಯಲ್ಲಿ ಆ.19 ರಂದು ಪೊಲೀಸರು ದಾಳಿ ನಡೆಸಿ 18 ಮೊಬೈಲ್, ಗಾಂಜಾ, ಸಿಗರೇಟ್ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಈ ವಿಚಾರದಲ್ಲಿ ಕರ್ತವ್ಯ ಲೋಪ ಸಾಬೀತಾದ ಹಿನ್ನಲೆಯಲ್ಲಿ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ: ಇಲ್ಲಿ ಅಣ್ಣ-ತಮ್ಮನ ಪ್ರಶ್ನೆ ಬರಲ್ಲ.. ರೈತರು, ನೀರಿನ ಪ್ರಶ್ನೆ: ಹೆಚ್‌ಡಿಕೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್