ಬೆಂಗಳೂರಿಗೆ ಕರೆತರುವಾಗ ಎಸ್ಕೇಪ್ ಆಗಲು ಯತ್ನ- ಆ್ಯಸಿಡ್ ನಾಗನ ಕಾಲಿಗೆ ಗುಂಡೇಟು

Public TV
1 Min Read

ಬೆಂಗಳೂರು: ಯುವತಿ ಮೇಲೆ ಆ್ಯಸಿಡ್ ಎರಚಿ ಭಾರೀ ಸುದ್ದಿಯಾಗಿದ್ದ ಆರೋಪಿ ನಾಗೇಶ್ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಪೊಲೀಸರು ಈತನನ್ನು ಬೆಂಗಳೂರಿಗೆ ಕರೆತುವಾಗ ಭಾರೀ ಹೈಡ್ರಾಮಾ ನಡೆಸಿದ್ದಾನೆ.

ಬೆಂಗಳೂರಿಗೆ ಕರೆ ತರುವಾಗ ಎಸ್ಕೇಪ್ ಆಗಲು ಯತ್ನಿಸಿದ್ದ ನಾಗನ ಕಾಲಿಗೆ ಪೊಲೀಸರು ಕೆಂಗೇರಿ ಬ್ರಿಡ್ಜ್ ಬಳಿ ಗುಂಡೇಟು ನೀಡಿದ್ದಾರೆ. ಸದ್ಯ ನಾಗ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇದನ್ನೂ ಓದಿ: ಸ್ವಾಮೀಜಿ ವೇಷಧರಿಸಿ ತಲೆಮರೆಸಿಕೊಂಡಿದ್ದ ಆ್ಯಸಿಡ್ ನಾಗ ಅರೆಸ್ಟ್

ಮೂತ್ರ ವಿಸರ್ಜನೆಗೆ ನಿಲ್ಲಿಸಿ ಅಂತ ನೈಸ್ ರೋಡಲ್ಲಿ ಕೇಳಿಕೊಂಡಿದ್ದ. ಇದಕ್ಕೆ ಅವಕಾಶ ಕೊಡದ ಪೊಲೀಸರು, ಬೆಂಗಳೂರು ಸಿಟಿಯ ಕೆಂಗೇರಿ ಮೇಲ್ಸೇತುವೆ ಬಳಿ ನಿಲ್ಲಿಸಿದ್ರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಆತನನ್ನ ಹಿಡಿಯಲು ಹೋದ ಕಾನ್ಸ್ ಟೇಬಲ್ ಮಹಾದೇವಯ್ಯರ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಈ ವೇಳೆ ಆರೋಪಿಯನ್ನ ಹಿಡಿಯಲು ಗಾಳಿಯಲ್ಲಿ ಒಮ್ಮೆ ಗುಂಡು ಹಾರಿಸಿ ಕಾಮಾಕ್ಷಿಪಾಳ್ಯ ಠಾಣೆಯ ಇನ್ಸ್‌ ಪೆಕ್ಟರ್ ಪ್ರಶಾಂತ್ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಆ್ಯಸಿಡ್ ನಾಗನನ್ನು ಹಿಡಿಯಲು ಸ್ವತಃ ಖಾವಿ ಧರಿಸಿದ್ದ ಪೊಲೀಸರು

ಗುಂಡೇಟು ತಿಂದ ಆರೋಪಿಗೆ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗೆ ಬಿಜಿಎಸ್ ಆಸ್ಪತ್ರೆಗೆ ಆರೋಪಿ ನಾಗೇಶ್ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *