ಠಾಣೆಯಲ್ಲಿಯೇ ಪೊಲೀಸ್ ಕೆನ್ನೆಗೆ ಹೊಡೆದ ವಿದ್ಯಾರ್ಥಿ

Public TV
1 Min Read

– ರಾಜನಂತೆ ಠಾಣೆಯಲ್ಲಿ ಕುಳಿತ ವಿದ್ಯಾರ್ಥಿ
– ಕಂಪ್ಯೂಟರ್ ವೈರ್ ಕಿತ್ತು ಹಾಕಿದ್ರು

ಬೆಂಗಳೂರು: ಕುಡಿದ ಅಮಲಿನಲ್ಲಿ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳು ಕೈ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ರಾಹುಲ್ ತ್ರಿಪಾಟಿ ಪೊಲೀಸ್ ಠಾಣೆಯಲ್ಲಿಯೇ ಪೊಲೀಸರ ಕೆನ್ನೆಗೆ ಹೊಡೆದಿದ್ದಾನೆ. ಈ ಘಟನೆ ಮೇ 4ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಏನಿದು ಪ್ರಕರಣ?
ರಾಹುಲ್ ತನ್ನ ಸ್ನೇಹಿತ ಆದಿತ್ಯ ಜೊತೆ ಗೋವಾದಿಂದ ಬಂದು ವಿದ್ಯಾಭ್ಯಾಸ ಮಾಡುತ್ತಿದ್ದನು. ಮೇ 4ರಂದು ರಾಹುಲ್ ಹಾಗೂ ಆದಿತ್ಯ ಇಬ್ಬರು ಕಂಠಪೂರ್ತಿ ಕುಡಿದು ಸಿಲ್ಕ್ ಬೋರ್ಡ್ ನಿಂದ ಮಾರತ್ ಹಳ್ಳಿ ಕಡೆಗೆ ರಾಯಲ್ ಎನ್‍ಫೀಲ್ಡ್ ಬೈಕಿನಲ್ಲಿ ತೆರಳುತ್ತಿದ್ದರು.

ಈ ವೇಳೆ ಹೆಚ್‍ಎಸ್‍ಆರ್ ಲೇಔಟ್ ಸಂಚಾರಿ ಪೊಲೀಸರು ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ಮಾಡುತ್ತಿದ್ದಾಗ ವಿದ್ಯಾರ್ಥಿಗಳನ್ನು ನಿಲ್ಲಿಸಿದ್ದಾರೆ. ಆಗ ಏಕಾಏಕಿ ಪೊಲೀಸರ ಮೇಲೆ ವಿದ್ಯಾರ್ಥಿಗಳು ಹಲ್ಲೆಗೆ ಮುಂದಾಗಿದ್ದು, ನಡುರಸ್ತೆಯಲ್ಲಿಯೇ ಪೊಲೀಸರ ಸಮವಸ್ತ್ರ ಹರಿದು ಹಾಕಿದ್ದಾರೆ. ಇದರಿಂದ ಕೋಪಗೊಂಡ ಪೊಲೀಸ್ ಸಿಬ್ಬಂದಿ ಇಬ್ಬರನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ರಾಹುಲ್ ತ್ರಿಪಾಟಿ ಠಾಣೆಯಲ್ಲಿ ಹೋಗಿದ್ದೇ ರಾಜನಂತೆ ಟೇಬಲ್ ಮೇಲೆ ಕುಳಿತಿದ್ದಾನೆ. ವಿದ್ಯಾರ್ಥಿಗಳ ಪುಂಡಾಟ ನೋಡಿ ರಾತ್ರಿ ಪಾಳಿಯ ಸಿಬ್ಬಂದಿ ಮೇಲಾಧಿಕಾರಿಗಳಿಗೆ ಫೋನ್ ಮಾಡಿ ಮಾಹಿತಿ ತಿಳಿಸಿದ್ದಾರೆ. ಆಗಲೆ ಕಮೀಷನರ್ ಗೆ ಕಾಲ್ ಮಾಡುತ್ತಿದ್ದೀಯಾ ಎಂದೇಳಿ ಅವರಿಂದ ರಾಹುಲ್ ಫೋನ್ ಕಿತ್ತುಕೊಂಡಿದ್ದಾನೆ. ಬಳಿಕ ಪೋನ್ ಬಿಸಾಡಿ ಪೊಲೀಸ್ ಪೇದೆಯ ಕಪಾಳಕ್ಕೆ ಹೊಡೆದಿದ್ದಾನೆ.

ಅಷ್ಟೇ ಅಲ್ಲದೇ ಠಾಣೆಯಲ್ಲಿ ಕಂಪ್ಯೂಟರ್ ವೈರ್ ಗಳನ್ನು ಕಿತ್ತುಹಾಕಿದ್ದಾನೆ. ಈ ವೇಳೆ ತಡೆಯಲು ಬಂದ ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ. ವಿದ್ಯಾರ್ಥಿಗಳ ಪುಂಡಾಟವನ್ನು ಪೊಲೀಸ್ ಸಿಬ್ಬಂದಿಯೇ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದರು. ಸದ್ಯಕ್ಕೆ ಇಬ್ಬರ ವಿರುದ್ಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಿಸಿದ್ದು, ಇಬ್ಬರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *