ಮದ್ಯ ಸೇವಿಸಿ ಶುರುವಾದ ವಾಗ್ವಾದದಲ್ಲಿ ಸ್ನೇಹಿತನನ್ನೇ ಕೊಂದ ಯುವಕ

Public TV
1 Min Read

ಮುಂಬೈ: 19 ವರ್ಷದ ಯುವಕ ತನ್ನ ಸ್ನೇಹಿತನ್ನು ಕ್ಷುಲ್ಲಕ ಕಾರಣಕ್ಕೆ ಕೊಡಲಿಯಿಂದ ಹತ್ಯೆಗೈದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಶನಿವಾರ ರಾತ್ರಿ ಪಾಲ್ಘರ್‌ ನ ಸಫಲಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಆರೋಪಿ ಮತ್ತು 24 ವರ್ಷದ ಯುವಕ ಇಬ್ಬರು ದಿನನಿತ್ಯದ ಕೂಲಿ ಕಾರ್ಮಿಕರಾಗಿದ್ದು, ಮದ್ಯ ಸೇವಿಸಿ ವಾಗ್ವಾದಕ್ಕೆ ಇಳಿದಿದ್ದಾರೆ. ನಂತರ ಇದು ಅತಿರೇಕಕ್ಕೆ ಹೋಗುತ್ತಿರುವುದನ್ನು ಗಮನಿಸಿದ ಸ್ಥಳೀಯರು ಇವರಿಬ್ಬರನ್ನು ಬಿಡಿಸಿ ತಮ್ಮ ತಮ್ಮ ಮನೆಗೆ ಕಳುಹಿಸಿದ್ದಾರೆ. ಇದನ್ನೂ ಓದಿ:  ತಂದೆಯನ್ನು ನೆನೆದು ಭಾವುಕರಾಗಿ ಕರಣ್ ಜೋಹರ್ ಪೋಸ್ಟ್

ಯುವಕನ ಮನೆಯಲ್ಲಿ ಎಲ್ಲರೂ ನಿದ್ರಿಸುತ್ತಿರುವಾಗ ಆರೋಪಿ ಆತನ ಮನೆಗೆ ಹೋಗಿ ಕೊಡಲಿಯಿಂದ ಹೊಡೆದು ಪರಾರಿಯಾಗಿದ್ದಾನೆ. ಈ ಪರಿಣಾಮ ಆತನ ಹೆಂಡತಿ ಸ್ಥಳದಲ್ಲಿದ್ದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಯಾವುದೇ ಪ್ರಯೋಜನವಾಗಿಲ್ಲ. ಇದನ್ನೂ ಓದಿ: ಬಿಜೆಪಿ ಈ ದೇಶದ ಬಗ್ಗೆ ಚಿಂತನೆ ಮಾಡುವ ಏಕೈಕ ಪಕ್ಷ: ಎ.ನಾರಾಯಣಸ್ವಾಮಿ

ವಿಷಯ ತಿಳಿದ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಬಂದು ವಿಚಾರಿಸಿದ್ದಾರೆ. ನಂತರ ಪೊಲೀಸರು ಖಚಿತ ಮಾಹಿತಿ ಮೇರೆಗೆ ಭಾನುವಾರ ಸಂಜೆ ದಹನು ಪ್ರದೇಶದ ಕುಗ್ರಾಮದಿಂದ ಆರೋಪಿಯನ್ನು ಬಂಧಿಸಿದ್ದು, ಆತನ ಮೇಲೆ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ:  ಮಕ್ಕಳಿಗಾಗಿ ಮಿಡಿದ ಹೃದಯ – ರಕ್ತದಾನ ಮಾಡಿ ಮಾನವೀಯತೆ ಮೆರೆದ ಪೊಲೀಸರು

ಸಣ್ಣಪುಟ್ಟ ವಾಗ್ವಾದದಿಂದ ಪ್ರಾರಂಭವಾದ ಇವರ ಜಗಳ ಅತಿರೇಕಕ್ಕೆ ಹೋಗಿ ನಂತರ ಈ ಕೊಲೆ ನಡೆದಿದೆ. ಆದರೆ ನಿಜವಾದ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿ ಸೋಮವಾರ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *