ರಾಜಕೀಯ ದ್ವೇಷ: ಕಾಂಗ್ರೆಸ್ ಕಚೇರಿಯಲ್ಲಿನ ವಸ್ತುಗಳ ನಾಶ – 25ಕ್ಕೂ ಹೆಚ್ಚು ವಾಹನಗಳ ಗಾಜು ಪೀಸ್‍ ಪೀಸ್

Public TV
0 Min Read

ಬೆಂಗಳೂರು: ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ತಡರಾತ್ರಿ ಐದಾರು ಬೈಕ್‍ಗಳಲ್ಲಿ ಆಗಮಿಸಿದ ದುಷ್ಕರ್ಮಿಗಳು ಮಚ್ಚು-ಲಾಂಗುಗಳನ್ನು ಝಳಪಿಸಿ ಸಾರ್ವಜನಿಕರ ಸ್ವತ್ತುಗಳನ್ನು ಜಖಂಗೊಳಿಸಿರುವ ಘಟನೆ ನಗರದ ಚೋಳರಪಾಳ್ಯದಲ್ಲಿ ನಡೆದಿದೆ.

ಚೋಳರಪಾಳ್ಯದ 2ನೇ ಕ್ರಾಸ್‍ನಲ್ಲಿರುವ ಕಾಂಗ್ರೆಸ್ ಕಚೇರಿಗೆ ನುಗ್ಗಿರುವ ದುಷ್ಕರ್ಮಿಗಳು ಹಲವು ವಸ್ತುಗಳನ್ನು ನಾಶಪಡಿಸಿದ್ದು ನಂತರ ಚೋಳರಪಾಳ್ಯದ ಗಲ್ಲಿಗಳಲ್ಲಿ ನಿಲ್ಲಿಸಿದ್ದ 25ಕ್ಕೂ ಹೆಚ್ಚು ವಾಹನಗಳನ್ನು ಜಖಂಗೊಳಿಸಿದ್ದಾರೆ. ಇನ್ನು ಚುನಾವಣಾ ಸಂದರ್ಭದಲ್ಲಿ 2 ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿತ್ತು.

ಇದೇ ದ್ವೇಷದ ಹಿನ್ನೆಲೆಯಲ್ಲಿ ದುಷ್ಕೃತ್ಯ ಎಸಗಿರುವ ಸಾಧ್ಯತೆಯಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೆಪಿ ಅಗ್ರಹಾರ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *