ವಾಯುಮಾಲಿನ್ಯ ನಿಯಂತ್ರಣ ವಿಫಲ – ಎನ್‍ಜಿಟಿಯಿಂದ ದೆಹಲಿ ಸರ್ಕಾರಕ್ಕೆ 25 ಕೋಟಿ ರೂ. ಫೈನ್

Public TV
1 Min Read

– ಸರ್ಕಾರದ ಖಜಾನೆಯಿಂದ ದಂಡ ಕಟ್ಟುವಂತಿಲ್ಲ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್(ಎಎಪಿ) ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (ಎನ್‍ಜಿಟಿ) 25 ಕೋಟಿ ರೂಪಾಯಿಯನ್ನು ದಂಡ ವಿಧಿಸಿದೆ.

ದೆಹಲಿಯಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವ ವಾಯು ಮಾಲಿನ್ಯವನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ವಾಯು ಮಾಲಿನ್ಯದ ಗುಣಮಟ್ಟವನ್ನು ಪರಿಶೀಲಿಸುವಲ್ಲಿಯೂ ಅಸಮರ್ಥವಾಗಿರುವ ಸರ್ಕಾರದ ವಿರುದ್ಧ ಎನ್‍ಜಿಟಿ ತೀವ್ರ ಅಸಮಾಧಾನ ಹೊರಹಾಕಿದೆ. ಅಲ್ಲದೇ ಸರ್ಕಾರಕ್ಕೆ ಬರೋಬ್ಬರಿ 25 ಕೋಟಿ ರೂಪಾಯಿಯ ದಂಡವನ್ನು ಸಹ ಹಾಕಿದೆ.

ದಂಡದ ಹಣವನ್ನು ಸರ್ಕಾರ ಖಜಾನೆಯಿಂದ ನೀಡುವಂತಿಲ್ಲ. ಬದಲಾಗಿ ಸರ್ಕಾರಿ ಅಧಿಕಾರಿಗಳ ಸಂಬಳ ಹಾಗೂ ಮಾಲಿನ್ಯ ಮಾಡಿದ್ದವರಿಂದ ವಸೂಲಿ ಮಾಡಿ ನೀಡುವಂತೆ ಸೂಚನೆ ನೀಡಿದೆ. ಒಂದು ವೇಳೆ ದೆಹಲಿ ಸರ್ಕಾರ 25 ಕೋಟಿ ರೂಪಾಯಿಯನ್ನು ನೀಡಲು ವಿಫಲವಾದರೇ, ಪ್ರತಿ ತಿಂಗಳು 10 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಪಾವತಿಸಬೇಕೆಂದು ಎನ್‍ಜಿಟಿ ಹೇಳಿದೆ.

ದೆಹಲಿಯ ಗುರುಗ್ರಾಮ, ನೋಯ್ಡಾ, ಪರಿದಾಬಾದ್, ಗಾಜಿಯಾಬಾದ್ ಸೇರಿದಂತೆ ಇನ್ನೂ ಹೆಚ್ಚಿನ ಪ್ರದೇಶಗಳಲ್ಲಿ ವಾಯುಮಾಲಿನ್ಯದ ಪ್ರಮಾಣ ಹೆಚ್ಚಾಗಿದೆ. ಅಲ್ಲದೇ ಜನರು ವಿಷಯುಕ್ತ ಗಾಳಿ ಸೇವನೆಯಿಂದಾಗಿ ನಾನಾ ರೀತಿಯ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಈ ಸಂಬಂಧ ದೆಹಲಿ ಸರ್ಕಾರದ ವಿರುದ್ಧ ಎನ್‍ಜಿಟಿಯಲ್ಲಿ 6ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಸೋಮವಾರ ಇದರ ವಿಚಾರಣೆ ನಡೆಸಿದ ಎನ್‍ಜಿಟಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಾಯಕತ್ವದ ಎಎಪಿ ಸರ್ಕಾರಕ್ಕೆ ಛೀಮಾರಿ ಹಾಕಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *