ಜೋಡೊ ಯಾತ್ರೆಗೆ ಬರೋ ಕಲಾವಿದರಿಗೆ ಕಾಂಗ್ರೆಸ್ ಹಣ ಕೊಟ್ಟಿದೆ – BJP ಟೀಕೆಗೆ ಖಡಕ್ ಉತ್ತರ ಕೊಟ್ಟ ನಟಿ

Public TV
2 Min Read

ಹೈದರಾಬಾದ್: ತೆಲಂಗಾಣದಲ್ಲಿ ಭಾರತ್ ಜೋಡೋ ಯಾತ್ರೆ (Bharat Jodo Yatra) ವೇಳೆ ಹೆಜ್ಜೆಹಾಕಿದ ಬಾಲಿವುಡ್ ತಾರೆ (Bollywood Actor) ಪೂಜಾ ಭಟ್ (Pooja Bhat) ಕಲಾವಿದರ ವಿರುದ್ಧ ಬಿಜೆಪಿ (BJP) ನಾಯಕರ ಟೀಕೆಗೆ ಖಡಕ್ ಉತ್ತರ ಕೊಟ್ಟಿದ್ದಾರೆ.

ಹೈದರಾಬಾದ್‌ನಲ್ಲಿ ಭಾರತ್ ಜೋಡೋ ಯಾತ್ರೆ ವೇಳೆ 15 ಕಿಮೀ ವರೆಗೆ ಹೆಜ್ಜೆ ಹಾಕಿದ ನಟಿ ಪೂಜಾ ಭಟ್, `ಕಲಾವಿದರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್‌ನಿಂದ ಹಣ ನೀಡಲಾಗುತ್ತಿದೆ’ ಎಂಬ ನಿತೇಶ್ ರಾಣೆ ಅವರ ಹೇಳಿಕೆಗೆ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಮಂದಣ್ಣ ರೀತಿಯಲ್ಲಿಯೇ ಕೈ ಸನ್ನೆ ಮಾಡಿ ರಿಷಬ್ ತಿರುಗೇಟು

ರಾಹುಲ್ ಗಾಂಧಿ (Rahul Gandhi) ಎಲ್ಲ ವಿಷಯಗಳನ್ನೂ ಯೋಚಿಸಲು ಅರ್ಹರಾಗಿದ್ದಾರೆ, ತಮ್ಮ ಅಭಿಪ್ರಾಯಗಳಿಗೆ ಪೂರ್ಣ ಗೌರವ ಹೊಂದಲೂ ಅರ್ಹರಿದ್ದಾರೆ. ಹಾಗಾಗಿ ನಾವು ಸಹ ಇತರರೊಂದಿಗೆ ಬದುಕುವ ಮುನ್ನ ತನ್ನೊಂದಿಗೆ ಬದುಕುವುದನ್ನು ಕಲಿಯಬೇಕು. ಯಾರೊಂದಿಗೂ ರಾಜಿಮಾಡಿಕೊಳ್ಳದ ವಿಷವೆಂದರೆ ಅದು ಆತ್ಮಸಾಕ್ಷಿ, ಮೊದಲು ನಾವು ನಮ್ಮ ಆತ್ಮಸಾಕ್ಷಿಗೆ ಬದ್ಧವಾಗಿರಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಷ್ಟ್ರ ಪ್ರಶಸ್ತಿ ನಿರ್ದೇಶಕ ಸತ್ಯ ಪ್ರಕಾಶ್ ಇದೀಗ ಹೀರೋ

ಹೈದರಾಬಾದ್‌ನಲ್ಲಿ ಯಾತ್ರೆಯಲ್ಲಿ ಪಾಲ್ಗೊಂಡ ಪೂಜಾ ಭಟ್, ಸುಶಾಂತ್ ಸಿಂಗ್ ಮಾತ್ರವಲ್ಲದೇ ಅಮೋಲ್ ಪಾಲೇಕರ್, ಸಂಧ್ಯಾ ಗೋಖಲೆ, ರಿಯಾ ಸೇನ್, ರಶ್ಮಿ ದೇಸಾಯಿ, ಆಕಾಂಕ್ಷಾ ಪುರಿ ಸೇರಿದಂತೆ ಹಲವಾರು ಬಾಲಿವುಡ್ ತಾರೆಯರು ಹೆಜ್ಜೆ ಹಾಕಿದ್ದಾರೆ.

ಬಿಜೆಪಿ ನಾಯಕ ನಿತೇಶ್ ರಾಣೆ ( Nitesh Rane) ಅವರು ವಾಟ್ಸಾಪ್ ನಿಂದ ಬಂದ ಸಂದೇಶವನ್ನು ಹಂಚಿಕೊಡಿದ್ದು, ಕಾಂಗ್ರೆಸ್‌ನಿAದ ಹಣ ನೀಡಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ. ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಕೂಡ ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *