ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ವಿಚಾರಣೆ- ಬೆಳಿಗ್ಗೆಯಿಂದ ನಗರ ಸಂಚಾರ ಮಾಡಿದ ಪೂಜಾಗಾಂಧಿ

Public TV
1 Min Read

ರಾಯಚೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ನಟಿ ಪೂಜಾಗಾಂಧಿ ರಾಯಚೂರಿಗೆ ಬಂದಿದ್ದು, ಬೆಳಿಗ್ಗೆಯಿಂದ ನಗರ ಸಂಚಾರ ನಡೆಸಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಓಡಾಡಿದ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.

ನಗರದ ತೀನ್ ಕಂದಿಲ್ ವೃತ್ತದಲ್ಲಿ ಸಾಧಿಕ್ ಟೀ ಅಂಗಡಿಯಲ್ಲಿ ಟೀ ಕುಡಿದು, ಟೀ ಅಂಗಡಿ ಮಾಲೀಕನೊಂದಿಗೆ ಸೆಲ್ಫಿ ತೆಗೆದುಕೊಂಡರು. ಬಳಿಕ ಆರ್‍ಟಿಓ ವೃತ್ತದ ಬಳಿಯ ವೈಟ್ ಹೌಸ್ ಎಕ್ಸಿಬಿಷನ್ ಗೆ ತೆರಳಿ ಅಭಿಮಾನಿಗಳೊಂದಿಗೆ ಮಾತನಾಡಿದರು. ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಯೋಚನೆ ಮಾಡಿಲ್ಲ ಅಂತ ಪೂಜಾಗಾಂಧಿ ತಿಳಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಯಚೂರು ನಗರ ಕ್ಷೇತ್ರಕ್ಕೆ ಬಿಎಸ್‍ಆರ್ ಕಾಂಗ್ರೆಸ್ ನಿಂದ ಪೂಜಾಗಾಂಧಿ ಸ್ಪರ್ಧಿಸಿದ್ದರು. ಚುನಾವಣಾ ಪ್ರಚಾರಕ್ಕೆ ಅನುಮತಿಯಿಲ್ಲದ ವಾಹನ ಬಳಿಸಿದ್ದ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಎದುರಿಸುತ್ತಿದ್ದಾರೆ.

ಪ್ರಕರಣದ ವಿಚಾರಣೆ ಇಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಜೆಎಂಎಫ್ ಸಿ-2 ರಲ್ಲಿ ವಿಚಾರಣೆ ನಡೆಯಲಿದ್ದು ಪದೇ ಪದೇ ವಿಚಾರಣೆಗೆ ಗೈರಾದ ಹಿನ್ನೆಲೆ ಅಕ್ಟೋಬರ್ 26 ರಂದು ಸುಮಾರು 6 ಗಂಟೆ ಕಾಲ ಕೋರ್ಟ್ ಕಸ್ಟಡಿಗೆ ಒಳಪಡಿಸಿದ್ದ ನ್ಯಾಯಾಧೀಶರು ಮುಂದೆ ವಿಚಾರಣೆಗೆ ಗೈರಾಗದಂತೆ ಎಚ್ಚರಿಕೆ ನೀಡಿದ್ದರು.

 

Share This Article
Leave a Comment

Leave a Reply

Your email address will not be published. Required fields are marked *