ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗ್ಳೂರು (Bengaluru) ನಗರದ ಹಲವೆಡೆ ಸೆ.23 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
66/11ಕೆ.ವಿ. ಯಲ್ಲಾರ್ ಬಂಡೆ ಉಪಕೇಂದ್ರ (ಉತ್ತರ) ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ (Power Supply) ವ್ಯತ್ಯಯ ಉಂಟಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಕಾವಲ್ಬೈರಸಂದ್ರ, ಎಲ್ಆರ್ ಬಂಡೆ ಮುಖ್ಯರಸ್ತೆ, ಗಾಂಧಿನಗರ, ಚಿನ್ನಣ್ಣ ಲೇಔಟ್, ಅಂಬೇಡ್ಕರ್ ಲೇಔಟ್, ಅನ್ವರ್ ಲೇಔಟ್, ಕಾವೇರಿ ನಗರ, ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಸುಲ್ತಾನ್ ಪಾಳ್ಯ, ರಂಕಾನಗರ, ಕನಕನಗರ, ಕೆಎಚ್ಬಿ ಮುಖ್ಯರಸ್ತೆ, ಭುವನೇಶ್ವರಿ ನಗರ, ಮಠಾಧೀಶ ಸಭಾಂಗಣ, ಮಠಾಧೀಶ ಸಭಾಂಗಣ ನಗರ, ವಿ ನಾಗೇನಹಳ್ಳಿ, ಪೆರಿಯಾರ್ ನಗರ, ಪೆರಿಯಾರ್ ವೃತ್ತ, ಶಂಪುರ, ಕುಶಾಲ್ ನಗರ, ಮೋದಿ ರಸ್ತೆ, ಮೋದಿ ಉದ್ಯಾನ, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಸಕ್ಕರೆ ಮಂಡಿ, ಉಪ್ಪಿನ ಮಂಡಿ, ಮುನೇಶ್ವರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.