ನಕ್ಷೆ ಮಂಜೂರಾತಿ, ಟಿಡಿಆರ್ ನೀಡುವ ಅಧಿಕಾರ ಇನ್ಮುಂದೆ GBA ವ್ಯಾಪ್ತಿಗೆ – ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಣಯ

Public TV
2 Min Read

– 5 ಪಾಲಿಕೆಗಳಿಗೆ ಐದು ಕಚೇರಿ ಅಂತಿಮ
– ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆಯಲ್ಲಿ ಮಹತ್ವದ ನಿರ್ಣಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿಂದು ಬೆಂಗಳೂರಿನಲ್ಲಿ ಜಿಬಿಎ ಮೊದಲ ಸಭೆ ನಡೀತು. ಜಿಬಿಎ (GBA) ಅಡಿಯಲ್ಲಿರುವ 5 ನಗರ ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳು ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳ ಚುನಾವಣೆ ಸಂಬಂಧಿಸಿದಂತೆ ಸಭೆ ಮಾಡಲಾಯಿತು. ಸಭೆಯಲ್ಲಿ ಬೆಂಗಳೂರಿನ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಗಳು ಹಾಗೂ ಕುಂದುಕೊರತೆಗಳ ಬಗ್ಗೆಯೂ ಚರ್ಚೆ ನಡೀತು.

ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸೇರಿದಂತೆ ಬೆಂಗಳೂರು ನಗರ ಕಾಂಗ್ರೆಸ್ ಶಾಸಕರು, ಜಿಬಿಎ ಪಾಲಿಕೆಗಳ ಆಯುಕ್ತರು, ಸದಸ್ಯರು ಭಾಗಿಯಾಗಿದ್ದರು. ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನ ಕೈಗೊಳ್ಳಲಾಯಿತು. ಇದನ್ನೂ ಓದಿ: ಟ್ರಾಫಿಕ್‌ ಸಮಸ್ಯೆ ಒಳ್ಳೆಯದು, ಇದು ಬೆಂಗಳೂರಿನ ಪ್ರಗತಿಯ ದಿಕ್ಸೂಚಿ: ಪ್ರಿಯಾಂಕ್‌ ಖರ್ಗೆ ವ್ಯಾಖ್ಯಾನ

ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (BDA)ಕ್ಕೆ ಇದ್ದ ಇದ್ದ ನಕ್ಷೆ ಮಂಜೂರಾತಿ ಹಾಗೂ TDR (ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕುಗಳು) ನೀಡುವ ಅಧಿಕಾರವನ್ನ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಗೆ ತರಲು ನಿರ್ಧರಿಸಲಾಯಿತು. ಜಿಬಿಎ ವ್ಯಾಪ್ತಿಯ 5 ನಗರಪಾಲಿಕೆಗಳಿಗೆ ಬಜೆಟ್‌ ತೀರ್ಮಾನ ಮಾಡುವ ಜೊತೆಗೆ ಬಿಎಂಟಿಸಿ ಹಾಗೂ ಅಗ್ನಿಶಾಮಕ ದಳವನ್ನೂ ಸಹ ಬಿಜೆಪಿ ವ್ಯಾಪ್ತಿಗೆ ಸೇರಿಸಿ ನಿರ್ಣಯ ಕೈಗೊಳ್ಳಲಾಯಿತು. ಇದನ್ನೂ ಓದಿ: ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿಗಣತಿ, GBA ಚುನಾವಣೆಗೆ ತಯಾರಿ ಎಲ್ಲಿ?: ಸರ್ಕಾರಕ್ಕೆ ವಿಜಯೇಂದ್ರ ಪ್ರಶ್ನೆ

ಸಭೆಯ ಮಹತ್ವದ ನಿರ್ಣಯಗಳೇನು?
– ಬಿಡಿಎಗೆ ಇದ್ದ ನಕ್ಷೆ ಮಂಜೂರಾತಿ ಇನ್ಮುಂದೆ ಜಿಬಿಎ ವ್ಯಾಪ್ತಿಗೆ
– ಟಿಡಿಆರ್ ನೀಡುವ ಅಧಿಕಾರ ಕೂಡ ಇನ್ಮುಂದೆ ಜಿಬಿಎ ವ್ಯಾಪ್ತಿಗೆ
– ಐದು ಪಾಲಿಕೆಗಳ ಬಜೆಟ್ ತೀರ್ಮಾನ
– ಬಿಎಂಟಿಸಿ, ಅಗ್ನಿ ಶಾಮಕ ದಳ, ಇನ್ಮುಂದೆ ಜಿಬಿಎ ವ್ಯಾಪ್ತಿಗೆ
– ಕೇಂದ್ರ ಸಂಯೋಜನಾ ಸಮಿತಿ ರಚನೆಗೆ ತೀರ್ಮಾನ (ಇಲಾಖೆಗಳ ನಡುವಿನ ಸಮನ್ವಯತೆಗೆ)
– ಜಿಬಿಎ ಮುಖ್ಯ ಆಯುಕ್ತರ ನೇತೃತ್ವದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಲು ತೀರ್ಮಾನ
– ಐದು ಪಾಲಿಕೆಗಳಿಗೆ ಐದು ಕಚೇರಿ ಅಂತಿಮ
– ಸೆಂಟ್ರಲ್ ಪಾಲಿಕೆ ಜಿಬಿಎ ಕೇಂದ್ರ ಕಚೇರಿಯಲ್ಲೇ ಕಚೇರಿ ಇರಲಿದೆ
– ಹೊಸ ಪಾಲಿಕೆ ಕಚೇರಿ ಕಟ್ಟಡಗಳು ಒಂದೇ ರೀತಿ ಇರಬೇಕೆಂದು ತೀರ್ಮಾನಿಸಲಾಗಿದೆ
– ಒಂದೇ ಮಾದರಿಯಲ್ಲಿ ಕಚೇರಿ ನಿರ್ಮಾಣ ಮಾಡಲು ತೀರ್ಮಾನ
– ಹೊಸದಾಗಿ ಐದು ಪಾಲಿಕೆಗಳಿಗೆ ಕಚೇರಿ ನಿರ್ಮಾಣ

ಬಿಜೆಎ ಸಭೆಗೆ ಬಿಜೆಪಿ ಶಾಸಕರ ಗೈರು
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಮೊದಲ ಸಭೆಗೆ ಬಿಜೆಪಿ ಶಾಸಕರು ಗೈರಾದರು. ಜಿಬಿಎ ರಚನೆ ಬಗ್ಗೆ ನಮಗೆ ವಿರೋಧವಿದೆ ಹಾಗಾಗಿ ನಾವು ಸಭೆಗೆ ಹಾಜರಾಗುವುದಿಲ್ಲ ಎಂದು ವಿರೋಧಿಸಿದ್ರು. 75 ಜಿಬಿಎ ಸದಸ್ಯರ ಪೈಕಿ ಕೇವಲ 35 ಸದಸ್ಯರು ಮಾತ್ರ ಸಭೆಗೆ ಹಾಜರಾಗಿದ್ದರು. ಹೀಗಾಗಿ ಮೊದಲ ಸಭೆಯಲ್ಲಿ ಸಿಎಂಗೆ ಹಿನ್ನಡೆಯಾಯ್ತು. ಇದನ್ನೂ ಓದಿ: ಸಿಎಂ ಡಿನ್ನರ್ ಮೀಟಿಂಗ್ ಸಿದ್ದರಾಮಯ್ಯ ಅಧಿಕಾರ ಅಂತ್ಯದ ಮುನ್ಸೂಚನೆಯಾ- ಛಲವಾದಿ ಪ್ರಶ್ನೆ

Share This Article