ಕಾಟಾಚಾರದ ಬೆಳೆ ವೀಕ್ಷಣೆ ಮಾಡಿದ ಸಚಿವ ಪ್ರಭು ಚವ್ಹಾಣ್

Public TV
1 Min Read

ಬೀದರ್: ಮಹಾ ಮಳೆ, ಧನ್ನೆಗಾಂವ್ ಹಾಗೂ ಕಾರಂಜಾ ಜಲಾಶಯದಿಂದ ಮಾಂಜ್ರಾನದಿಗೆ ಅಪಾರ ಪ್ರಮಾಣದ ನೀರು ಬಿಟ್ಟ ಪರಿಣಾಮ ಗಡಿ ಜಿಲ್ಲೆ ಬೀದರ್ ಅತಿವೃಷ್ಠಿಗೆ ನಲುಗಿ ಹೋಗಿದೆ. ಬೆಳೆಹಾನಿಯಾದ ಸ್ಥಳಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಬೆಳೆ ವಿಕ್ಷಣೆ ಮಾಡಿದ್ದಾರೆ.

ಬೀದರ್ ತಾಲೂಕಿನ ನೇಮತಾಬಾದ್, ಅಲ್ಲೇಪೂರೆ ಹಾಗೂ ಔರಾದ್ ತಾಲೂಕಿನ ಕೌಠಾ ಬಳಿಯ ಮಾಂಜ್ರಾನದಿಗೆ ಭೇಟಿ ನೀಡಿದ್ದರು. ಸಚಿವರು ಬೆಳೆಹಾನಿಯಾದ ಸ್ಥಳದಲ್ಲಿ ಕೇವಲ 10 ನಿಮಿಷಗಳ ಕಾಲ ವೀಕ್ಷಣೆ ಮಾಡಿ ಸ್ಥಳದಲ್ಲಿ ಕ್ಯಾಮೆರಾಗೆ ಪೋಸು ಕೋಡುತ್ತಾ ಕಾಟಾಚಾರಕ್ಕೆ ಬೆಳೆ ವೀಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ:  ಜೆಡಿಎಸ್ ತೋಟದ ಮನೆಗೆ ಕರೆದೊಯ್ದು ಸಂಘಟನೆ ಮಾಡಬೇಕು: ಆರಗ ಜ್ಞಾನೇಂದ್ರ

ಈ ವೇಳೆ ಇಷ್ಟೋದು ಬೆಳೆಹಾನಿಯಾಗಿದ್ದರು ಇನ್ನೂ ಅಧಿಕಾರಿಗಳು ಸ್ಥಳಕ್ಕೆ ಬರುತ್ತಿಲ್ಲಾ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್‍ಗೆ ರೈತರು ತರಾಟೆ ತೆಗೆದುಕೊಂಡರು. ಜಿಲ್ಲಾಧಿಕಾರಿ ರಾಮಚಂದ್ರನ್ ಆರ್,ಕೃಷಿ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *