ಅಹಂಕಾರ ಪಂಕ್ಚರ್ ಮಾಡಿ ಸ್ಥಾನ ತೋರಿಸಿದ್ದಕ್ಕೆ ಧನ್ಯವಾದಗಳು ಎಂದ ಪ್ರಕಾಶ್ ರಾಜ್

Public TV
1 Min Read

ಲೋಕಸಭಾ ಚುನಾವಣೆ (Loksabha Election 2024) ಫಲಿತಾಂಶ ಹೊರಬಿದ್ದಿದೆ. ಸದ್ಯ ಎನ್‌ಡಿಎ ಬಹುಮತ ಪಡೆದರೂ ಇಂಡಿಯಾ ಒಕ್ಕೂಟದ ಅತ್ಯುತ್ತಮ ಸಾಧನೆ ಮಾಡಿದೆ. ಈ ಬೆನ್ನಲ್ಲೇ ಪ್ರಕಾಶ್ ರಾಜ್ (Prakash Raj) ಮಾಡಿರುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಅಹಂಕಾರ ಪಂಕ್ಚರ್ ಮಾಡಿದ್ದಕ್ಕೆ ಧನ್ಯವಾದಗಳು ಎಂದು ನಟ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ನಾನು ರಿಲೇಷನ್‌ಶಿಪ್‌ನಲ್ಲಿದ್ದೇನೆ ಎಂದು ಪಡ್ಡೆಹುಡುಗರಿಗೆ ಶಾಕ್ ಕೊಟ್ಟ ಕೃತಿ ಶೆಟ್ಟಿ

ಚಕ್ರವರ್ತಿ ಬೆತ್ತಲಾಗಿದ್ದಾನೆ. ಅವನು ಈಗ ಅನಿವಾರ್ಯವಾಗಿ ಬೇರೊಬ್ಬನ ಬೆಂಬಲದೊಂದಿಗೆ ಮುನ್ನಡೆಯಬೇಕಿದೆ ಎಂದು ಪ್ರಕಾಶ್ ರಾಜ್ ಬರೆದುಕೊಂಡಿದ್ದಾರೆ. ಇಂಡಿಯಾ ಮತ್ತು ಜವಾಬ್ದಾರಿಯುತ ನಾಗರಿಕ ಸಮಾಜಕ್ಕೆ ಧನ್ಯವಾದಗಳು. ಅಹಂಕಾರ ಪಂಕ್ಚರ್ ಮಾಡಿ ಅವರ ಸ್ಥಾನ ತೋರಿಸಿದ್ದಕ್ಕೆ ಥ್ಯಾಂಕ್ಯೂ ಎಂದಿದ್ದಾರೆ. ನಾನು ನಮ್ಮ ದೇಶಕ್ಕಾಗಿ ಚೆನ್ನಾಗಿ ಹೋರಾಡುತ್ತಿದ್ದೇವೆ. ನಾವು ಹೀಗೆ ಮುಂದುವರಿಯುತ್ತೇವೆ ಎಂದು ಪ್ರಕಾಶ್ ರಾಜ್ ಚುನಾವಣೆ ಫಲಿತಾಂಶದ ಬಳಿಕ ತಮ್ಮದೇ ಶೈಲಿಯಲ್ಲಿ ರಿಯಾಕ್ಟ್ ಮಾಡಿದ್ದಾರೆ. ನಟನ ಪೋಸ್ಟ್‌ಗೆ ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ.

Share This Article