ಪಕ್ಷ ಬೇರೆಯಾದ್ರೂ ಗುಣಕ್ಕೆ ಮತ್ಸರವಿಲ್ಲ- ಮೋದಿಯನ್ನು ಹೊಗಳಿದ ಪ್ರಮೋದ್ ಮಧ್ವರಾಜ್

Public TV
1 Min Read

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ನಾಯಕ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಹಿರಂಗವಾಗಿ ಗುಣಗಾನ ಮಾಡಿದ್ದಾರೆ. ಈ ವಿಚಾರ ಕರಾವಳಿ ಕಾಂಗ್ರೆಸ್ಸಿನಲ್ಲಿ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಕಾಂಗ್ರೆಸ್ ವಾಟ್ಸಾಪ್ ಗ್ರೂಪಲ್ಲಿ ಪರ ವಿರೋಧ ಚರ್ಚೆ ಶುರುವಾಗಿದೆ.

ವರ್ಷದ ಹಿಂದೆ ವೃಂದಾವನಸ್ಥರಾದ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿಯವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ. ದೆಹಲಿಯಲ್ಲಿ ಪ್ರಶಸ್ತಿ ಸ್ವೀಕರಿಸಿದ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಉಡುಪಿಗೆ ಆಗಮಿಸಿದ್ದಾರೆ. ಗುರುವಾರ ಸಂಜೆ ಪ್ರಶಸ್ತಿ ಮತ್ತು ಶ್ರೀಗಳ ಸ್ವಾಗತ ಸಮಾರಂಭದಲ್ಲಿ ಅಷ್ಟಮಠಾಧೀಶರು, ಜನಪ್ರತಿನಿಧಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

ಈ ಸಂದರ್ಭ ನಡೆದ ಸಭೆಯಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಭಾಗಿಯಾಗಿ ಭಾಷಣ ಮಾಡಿದರು. ಪದ್ಮವಿಭೂಷಣ ಇವತ್ತು ಸ್ವಾಮೀಜಿಯವರನ್ನು ಹುಡುಕಿಕೊಂಡು ಬಂದಿದೆ. ಹಿಂದೆ ಎಲ್ಲಾ ಅರ್ಜಿ ಹಾಕಿದವರಿಗೆ ಪ್ರಶಸ್ತಿ ಕೊಡುವ ಕ್ರಮ ಇತ್ತು. ಇವತ್ತು ನರೇಂದ್ರ ಮೋದಿಯವರ ಸರ್ಕಾರ ಬಂದ ಮೇಲೆ ಪ್ರಶಸ್ತಿಯನ್ನು ಹುಡುಕಿಕೊಂಡು ಹೋಗುವಂತಹ ಸಂದರ್ಭ. ಪಕ್ಷ ಬೇರೆಯಾದರೂ ಗುಣಕ್ಕೆ ಮತ್ಸರ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ನಮ್ಮ ಕುಟುಂಬಕ್ಕೆ MLC ಟಿಕೆಟ್ ಕೊಡಬೇಕು ಅಂತ ಹೇಳಿಲ್ಲ, ಕೇಳಿಲ್ಲ: ಪ್ರಜ್ವಲ್ ರೇವಣ್ಣ

ನಾನು ವಿರೋಧ ಪಕ್ಷದಲ್ಲಿ ಇರುವವನು. ಆದರೂ ಅವರ ಒಳ್ಳೆಯ ಕೆಲಸಗಳನ್ನು ಶ್ಲಾಘಿಸಲೇಬೇಕು ಎಂದರು. ಈ ಮಾತಿನ ತುಣುಕು ಕರಾವಳಿಯಲ್ಲಿ ಚರ್ಚೆಗೀಡಾಗಿದೆ. ಉಡುಪಿಯ ಕಾಂಗ್ರೆಸ್ ಬಿಜೆಪಿ ವಾಟ್ಸಪ್ ಗ್ರೂಪ್ ಗಳಲ್ಲಿ ವೀಡಿಯೋ ಓಡಾಡುತ್ತಿದೆ. ಸಭೆಯಲ್ಲಿ ಪರ್ಯಾಯ ಅದಮಾರು ಶ್ರೀ, ಪಲಿಮಾರು ಹಿರಿಯ ಕಿರಿಯ ಸ್ವಾಮೀಜಿ, ಸೋದೆ ಸ್ವಾಮೀಜಿ, ಉಡುಪಿ ಶಾಸಕ ರಘುಪತಿ ಭಟ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯೆ ಶ್ಯಾಮಲಾ ಕುಂದರ್ ವೇದಿಕೆಯಲ್ಲಿ ಇದ್ದರು.

Share This Article
Leave a Comment

Leave a Reply

Your email address will not be published. Required fields are marked *