ಜಮೀರ್‌ನನ್ನು ಗಡಿಪಾರು ಮಾಡೋದು ಬೇಡ ಆಲದ ಮರಕ್ಕೆ ನೇಣು ಹಾಕಿ: ಮುತಾಲಿಕ್ ಕಿಡಿ

Public TV
1 Min Read

ಚಿಕ್ಕಮಗಳೂರು: ಸಚಿವ ಜಮೀರ್ ಅಹಮದ್‍ರನ್ನು (Zameer Ahmed) ಗಡಿಪಾರು ಮಾಡ್ಬೇಕು, ಕಿತ್ತಾಕಬೇಕು ಎಂದು ಮಾತಾಡುತ್ತಿದ್ದಾರೆ. ಅದೆಲ್ಲ ಬೇಡ ಯಾವುದಾದರೂ ಆಲದ ಮರಕ್ಕೆ ನೇಣು ಹಾಕಿ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಕಿಡಿಕಾರಿದ್ದಾರೆ.

ಚಿಕ್ಕಮಗಳೂರಿನಲ್ಲಿ (Chikkamagaluru) ದತ್ತಮಾಲೆ ಅಭಿಯಾನದ ಧರ್ಮಸಭೆಯಲ್ಲಿ ಅವರು ಮಾತನಾಡಿದರು. ಈ ವೇಳೆ, ಬೆಂಗಳೂರಿನ ಚಾಮರಾಜಪೇಟೆಯಲ್ಲಿ 25,000 ಬಾಂಗ್ಲಾದೇಶಿ ಮುಸಲ್ಮಾನರಿದ್ದಾರೆ. ಅವರನ್ನು ಜಮೀರ್ ಸಾಕಿ, ಓಟರ್ ಲೀಸ್ಟ್ ತಯಾರು ಮಾಡಿದ್ದಾನೆ. ಈ ರೀತಿ ಅನೇಕ ಬ್ಲಂಡರ್ ಗಳನ್ನ ಸನ್ಮಾನ್ಯ ಔರಂಗಜೇಬ್ ಮಾಡಿದ್ದಾನೆ ಎಂದು ಏಕವಚನದಲ್ಲೇ ಕಿಡಿಕಾರಿದ್ದಾರೆ.

ಬಿಜೆಪಿಯವರು ಜಮೀರ್‍ನನ್ನು ಗಡಿಪಾರು, ಕಿತ್ತಾಕಿ, ಸಸ್ಪೆಂಡ್ ಮಾಡಿ ಅಂತಿದ್ದಾರೆ. ಗಡಿಪಾರು, ಸಸ್ಪೆಂಡ್ ಬೇಡ ಯಾವುದಾರೂ ಆಲದಮರಕ್ಕೆ ನೇಣು ಹಾಕಿ. ಜಮೀರ್ ಈ ದೇಶದಲ್ಲಿ ಇರಲು ಲಾಯಕ್ಕಿಲ್ಲ. ಯಾರ ಭೂಮಿ, ಕಟ್ಟಡ ಬೇಕೋ ಅದನ್ನು ತೆಗೆದುಕೊಂಡು ನುಂಗಿ ನೀರು ಕುಡಿಯೋಕೆ ಇದು ನಿಮ್ಮ ಅಪ್ಪಂದ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

Share This Article