ಬಿಟ್ ಕಾಯಿನ್ ಎಂದರೇನು? ನಮ್ಮಂತವರಿಗೆ ಸಿದ್ದರಾಮಯ್ಯನವರು ವಿವರಿಸಲಿ: ಪ್ರತಾಪ್ ಸಿಂಹ

Public TV
1 Min Read

ಮೈಸೂರು: ಬಿಟ್ ಕಾಯಿನ್ ಎಂದರೇನು? ಇದರ ಬಗ್ಗೆ ತಿಳಿದುಕೊಳ್ಳುವ ಕುತೂಹಲವಿದೆ ಅದನ್ನು ನಮ್ಮಂತವರಿಗೆ ಮಹಾನ್ ಆರ್ಥಿಕ ತಜ್ಞ ಸಿದ್ದರಾಮಯ್ಯನವರು ವಿವರಿಸಲಿ, ಆರೋಪ ಮಾಡಿದವರು ಅವರೇ ನಮಗೆ ತಿಳಿಸಿಕೊಡಲಿ. ನನಗೆ ಆ ಬಗ್ಗೆ ಮಾಹಿತಿ ಇಲ್ಲ, ಹಾಗಾಗಿ ಕೇಳುತ್ತಿದ್ದೇನೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಆರೋಪ ಮಾಡುತ್ತಿರುವುದರೊಂದಿಗೆ, ಕಾಂಗ್ರೆಸ್ ಮಾಧ್ಯಮಗಳ ಮೂಲಕ ನಿರೀಕ್ಷಣಾ ಜಾಮೀನು ಹಾಕುತ್ತಿದೆ. ಈ ಪ್ರಕರಣದಲ್ಲಿ ಗಂಭೀರವಾಗಿ ತನಿಖೆ ಮಾಡಿದರೆ, ಕಾಂಗ್ರೆಸ್‍ನವರೇ ಇದರಲ್ಲಿ ಸಿಕ್ಕಿ ಹಾಕಿಕೊಳ್ಳುತ್ತಾರೆ. ಈಗಾಗಲೇ ಮೊದಲ ಚಾರ್ಜ್ ಶೀಟ್‍ನಲ್ಲಿ ಕಾಂಗ್ರೆಸ್ ಮುಖಂಡರ ಮಕ್ಕಳ ಹೆಸರೆ ಉಲ್ಲೇಖ ಆಗಿದೆ. ಹೀಗಾಗಿ ಕಾಂಗ್ರೆಸ್ ನವರಿಗೆ ಭಯ ಶುರುವಾಗಿ ನಿರೀಕ್ಷಣಾ ಜಾಮೀನು ಹಾಕುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬಿಟ್ ಕಾಯಿನ್ ಹಗರಣದಲ್ಲಿ ನನ್ನ ಹೆಸ್ರು ಬೇಕಾದ್ರೆ ಹೇಳಲಿ: ಡಿ.ಕೆ ಶಿವಕುಮಾರ್

ರಫೇಲ್ ವಿಚಾರದಲ್ಲು ಕಾಂಗ್ರೆಸ್‍ನ ಅಮ್ಮ, ಮಗಾ ಹೀಗೆ ಮಾಡಿದರು. ತಾವು ಡೀಲ್ ಮಾಡಿಕೊಂಡು ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದರು. ಈಗ ಅವರ ಡೀಲ್ ಬಯಲಾಗಿದೆ. ರಾಜ್ಯದಲ್ಲು ಅದೇ ತಂತ್ರವನ್ನು ಕಾಂಗ್ರೆಸ್ ಪ್ರಯೋಗಿಸುತ್ತಿದೆ. ಈ ಪ್ರಕರಣವು ಕಾಂಗ್ರೆಸ್ ಕೊರಳಿಗೆ ಸುತ್ತಿಕೊಳ್ಳುತ್ತಿದೆ. ಇದರಿಂದ ಕಾಂಗ್ರೆಸ್ ಬಿಜೆಪಿ ಮೇಲೆ ಮೊದಲೇ ಆರೋಪ ಮಾಡುತ್ತಿದ್ದಾರೆ. ನಮಗೆ ಬಿಟ್ ಕಾಯಿನ್ ಬಗ್ಗೆ ಮಹಾನ್ ಆರ್ಥಿಕಾ ತಜ್ಞರಾಗಿರುವ ಸಿದ್ದರಾಮಯ್ಯನವರು ನಮಗೆಲ್ಲರಿಗೂ ತಿಳಿಸಿಕೊಡಲಿ. ಬಸವರಾಜ ಬೊಮ್ಮಾಯಿ ಅವರ ಯಶಸ್ವಿ ಆಡಳಿತ ಸಹಿಸದೆ ಹೀಗೆ ಸುಳ್ಳು, ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ – ಹ್ಯಾರಿಸ್, ಲಮಾಣಿ ಪುತ್ರರ ಹೆಸರು ಹೇಳಿರೋ ಹ್ಯಾಕರ್ ಶ್ರೀಕಿ

Share This Article
Leave a Comment

Leave a Reply

Your email address will not be published. Required fields are marked *