ಪ್ರವೀಣ್‌ ಕೇಸ್‌ – ಅಪರಾಧ ಎಸಗಿದವರಿಗೆ ಕಠಿಣ ಕ್ರಮ: ಶಾ ಭರವಸೆ

Public TV
1 Min Read

ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.

ಇತ್ತೀಚೆಗೆ ಹತ್ಯೆಗೊಳಗಾದ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಪ್ರಕರಣದ ತನಿಖೆಯನ್ನು ಎನ್‌ಐಗೆ ಒಪ್ಪಿಸಿರುವುದಕ್ಕೆ ಅವರು ಧನ್ಯವಾದ ಸಮರ್ಪಿಸಿದರು. ಅಲ್ಲದೆ ಈ ಪ್ರಕರಣದ ತನಿಖೆಯಲ್ಲಿ ವಿಶೇಷ ಕಾಳಜಿ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುವಂತೆ ನಳಿನ್ ಕುಮಾರ್ ಕಟೀಲ್ ಅವರು ವಿನಂತಿಸಿದರು. ಇದನ್ನೂ ಓದಿ: ಪ್ರವೀಣ್ ಕೇಸ್: NIA ವಿಚಾರಣೆ ಎದುರಿಸಿ ಬಂದ PFI ಕಾರ್ಯದರ್ಶಿಗೆ ಅದ್ಧೂರಿ ಸ್ವಾಗತ

ಈ ಸಂದರ್ಭದಲ್ಲಿ ಗೃಹ ಸಚಿವರು ರಾಜ್ಯದಲ್ಲಿ ಎನ್ಐಗೆ ವಹಿಸಿರುವ ಪ್ರಕರಣಗಳ ತನಿಖೆಯನ್ನು ಶೀಘ್ರವಾಗಿ ಕೈಗೊಂಡು ಅಪರಾಧ ಕೃತ್ಯ ಎಸಗುವವರಿಗೆ ಕಠಿಣ ಕ್ರಮಗಳನ್ನು ನೀಡಲಾಗುವುದು ಮತ್ತು ಎನ್‌ಐಐ ಅಧಿಕಾರಿಗಳಿಗೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸುವುದಾಗಿ ಭರವಸೆ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *