ಕಾಲ್ತುಳಿತ ಪ್ರಕರಣ – ಮರಣೋತ್ತರ ಪರೀಕ್ಷೆ ನಡೆಸದೇ ಯುಪಿ ಸರ್ಕಾರದಿಂದ ಡೆತ್ ಸರ್ಟಿಫಿಕೇಟ್

Public TV
1 Min Read

ಬೆಳಗಾವಿ: ಪ್ರಯಾಗ್‌ರಾಜ್ ಕಾಲ್ತುಳಿತದಲ್ಲಿ (Prayagraj Stampede) ಬೆಳಗಾವಿ ಮೂಲದ ನಾಲ್ವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ನಡೆಸದೇ ಡೆತ್ ಸರ್ಟಿಫಿಕೇಟ್ (Death Certificate) ನೀಡಿದ ಯುಪಿ ಸರ್ಕಾರ ಎನ್ನುವ ಪ್ರಶ್ನೆ ಮೂಡಿದೆ.

ಬೆಳಗಾವಿಯ ಮೃತ ನಾಲ್ವರ ಡೆತ್ ಸರ್ಟಿಫಿಕೇಟ್ ಲಭ್ಯವಾಗಿದೆ. ಬೆಳಗಾವಿಯ ಅರುಣ್ ಕೋಪರ್ಡೆ, ಮಹಾದೇವಿ, ಜ್ಯೋತಿ, ಮೇಘಾ ಮೃತಪಟ್ಟಿದ್ದರು.ಮೃತರ ಸಂಬಂಧಿಗಳ ವಾಟ್ಸಪ್ ಗೆ ಡೆತ್ ಸರ್ಟಿಫಿಕೇಟ್ ಬಂದಿದೆ.

ಸೆಂಟ್ರಲ್ ಹಾಸ್ಪಿಟಲ್ ಪ್ರಯಾಗ್‌ರಾಜ್ ಮಹಾಕುಂಭ ಹೆಸರಿನಲ್ಲಿ ಸರ್ಟಿಫಿಕೇಟ್ ಬಂದಿದೆ. ಮರಣೋತ್ತರ ಪರೀಕ್ಷೆ ನಡೆಸದೇ ಡೆತ್ ಸರ್ಟಿಫಿಕೇಟ್ ನೀಡಿತಾ ಯುಪಿ ಸರ್ಕಾರ ಎನ್ನುವ ಪ್ರಶ್ನೆ ಮೂಡಿದೆ.

ಬೆಳಗಾವಿಯಲ್ಲಿ ಜಿಲ್ಲಾಡಳಿತದಿಂದ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. 4 ಜನರ ಮರಣೋತ್ತರ ಪರೀಕ್ಷೆ ನಡೆಸಿ ಬಳಿಮ ಶವ ಹಸ್ತಾಂತರವನ್ನ ಬೆಳಗಾವಿ ಜಿಲ್ಲಾಡಳಿತ ಮಾಡಿತ್ತು.

Share This Article