ಹಬ್ಬದ ಸಿದ್ಧತೆ – ಕೆಲಸ ಮುಗಿಸಿ ಮನೆ ಸೇರಲು ಹೊರಟವರು ಮಸಣ ಸೇರಿದರು

Public TV
1 Min Read

ಚಿಕ್ಕಬಳ್ಳಾಪುರ: ಆಪೆ ಆಟೋಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಮಹಿಳೆಯರು ಆಸ್ಪತ್ರೆ ಸೇರಿರುವ ಮನಕಲಕುವ ಘಟನೆ ಜಿಲ್ಲೆಯ ಗೌರಿಬಿದನೂರು ನಗರ ಹೊರವಲಯದ ಗುಂಡಾಪುರದ ಬಳಿ ನಡದಿದೆ.

ಗೌರಿಬಿದನೂರು ನಗರ ಹೊರವಲಯದ ರೇಮೆಂಡ್ಸ್ ಗಾರ್ಮೆಂಟ್ಸ್ ನಲ್ಲಿ ಕೆಲಸ ಮುಗಿಸಿಕೊಂಡು ಗಣೇಶ ಹಬ್ಬದ ಅಂಗವಾಗಿ ಆಟೋ ಹತ್ತಿ ಊರಿಗೆ ಹೊರಟ ಮಹಿಳೆಯರೇ ಇದ್ದ ಆಪೆ ಅಟೋಗೆ ಮಧುಗಿರಿ ಕಡೆಯಿಂದ ಗೌರಿಬಿದನೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಗಾಯತ್ರಿ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸವಿತಾ ಎಂಬುವರು ಮಾರ್ಗ ಮಧ್ಯೆ ಅಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.

ಆಟೋ ಚಾಲಕ ಹಾಗೂ ಉಳಿದ 4 ನಾಲ್ವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಗೌರಿಬಿದನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದೆಡೆ ಗೌರಿಬಿದನೂರು ತಾಲೂಕು ತೊಂಡೆಬಾವಿ ಬಳಿ ಸಹ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಟ್ರೇಮೋರ್ ಜೋಸೆಫ್ ಪುರ್ತಧೋ(53) ಮೃತಪಟ್ಟಿದ್ದಾರೆ. ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *