ಮೊದಲ ಬಾರಿಗೆ ಅಯೋಧ್ಯೆಗೆ ರಾಷ್ಟ್ರಪತಿ ಭೇಟಿ – ಬಾಲರಾಮನ ದರ್ಶನ, ವಿಶೇಷ ಪೂಜೆ ಸಲ್ಲಿಕೆ

Public TV
1 Min Read

ಅಯೋಧ್ಯೆ: ಉದ್ಘಾಟನೆ ಬಳಿಕ ಮೊದಲ ಬಾರಿಗೆ ಅಯೋಧ್ಯೆ (Ayodhya) ರಾಮಮಂದಿರಕ್ಕೆ (Ram Temple) ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಭೇಟಿ ನೀಡಿ ಭಗವಾನ್‌ ರಾಮಲಲ್ಲಾನ ದರ್ಶನ ಪಡೆದರು.

ಅಯೋಧ್ಯಾಧಾಮ ತಲುಪಿ ಮೊದಲು ಹನುಮಾನ್ ಗರ್ಹಿಯಲ್ಲಿ ದೇವರ ದರ್ಶನ ಮತ್ತು ಪೂಜೆ ಸಲ್ಲಿಸಿದರು. ಅರ್ಚಕ ರಾಜು ದಾಸ್, ರಾಷ್ಟ್ರಪತಿಗೆ ಬೆಳ್ಳಿ ಗದೆ, ಬೆಳ್ಳಿ ರಾಮ್ ದರ್ಬಾರ್ ಮತ್ತು ಹಸುವಿನ ಪ್ರತಿಕೃತಿಯನ್ನು ನೀಡಿದರು. ಇದನ್ನೂ ಓದಿ: ಟಿಎಂಸಿಗಿಂತ ಬಿಜೆಪಿಗೆ ವೋಟ್‌ ಹಾಕೋದು ಉತ್ತಮ: ಕೈ ನಾಯಕ ಅಧೀರ್‌ ರಂಜನ್‌

ಹನುಮಂತನಗರಕ್ಕೆ ಭೇಟಿ ನೀಡಿದ ನಂತರ ರಾಷ್ಟ್ರಪತಿಗಳು ಸರಯೂ ಘಾಟ್‌ನ ಆರತಿ ಸ್ಥಳಕ್ಕೆ ತಲುಪಿದರು. ಅಲ್ಲಿ ಅವರು ಮಹಾ ಆರತಿಯಲ್ಲಿ ಭಾಗವಹಿಸಿದರು. ಸರಯೂ ಘಾಟ್‌ನ ಸುತ್ತಲೂ ವೇದಮಂತ್ರಗಳ ಪ್ರತಿಧ್ವನಿ ಕೇಳಿಬಂತು.

ರಾಷ್ಟ್ರಪತಿಯವರೊಂದಿಗೆ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ಮತ್ತು ಯುಪಿ ಸರ್ಕಾರದ ಸಚಿವ ಸೂರ್ಯ ಪ್ರತಾಪ್ ಶಾಹಿ ಉಪಸ್ಥಿತರಿದ್ದರು. ಇದನ್ನೂ ಓದಿ: ಮತ ಪ್ರಮಾಣ ದಿಢೀರ್‌ ಹೆಚ್ಚಳ – ಮತ್ತೆ ಇವಿಎಂ ವಿಶ್ವಾಸರ್ಹತೆಯನ್ನು ಪ್ರಶ್ನಿಸಿದ ಮಮತಾ

Share This Article