ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ತಾಲೀಮು ನಡೆಸಿದ್ದು ಯಾಕೆ?

Public TV
1 Min Read

ಬೆಂಗಳೂರು: ಈ ಬಾರಿ ರಾಷ್ಟ್ರಪತಿ ಮತದಾನಕ್ಕೆ ಬಿಜೆಪಿ ಭರ್ಜರಿ ತಯಾರಿ ಮಾಡಿಕೊಂಡಿದ್ದು ಒಂದೇ ಒಂದು ಮತವೂ ಅಸಿಂಧುವಾಗದಂತೆ ಎಚ್ಚರಿಕೆ ವಹಿಸಲಾಗಿದೆ.

ಈ ಮೊದಲು ಮತದಾನ ಪ್ರಕ್ರಿಯೆಯಲ್ಲಿ ಇಂದನ ಸಚಿವ ಸುನೀಲ್ ಕುಮಾರ್ ಶಾಸಕರಾದ ಸಿ ಟಿ ರವಿ, ಸತೀಶ್ ರೆಡ್ಡಿ, ಅಭಯ್ ಪಾಟೀಲ್ ತರಬೇತಿ‌ ಪಡಿದ್ದರು. ತರಬೇತಿ ಪಡೆದ ಈ ಶಾಸಕರು ಭಾನುವಾರ ನಗರದ ಖಾಸಗಿ ಹೋಟೆಲಿನಲ್ಲಿ ಅಣಕು ಮತದಾನದ ತರಬೇತಿ ನೀಡಿದ್ದಾರೆ.

ಕಳೆದ ಬಾರಿಯ ಚುನಾವಣೆಯಲ್ಲಿ 17 ಮತಗಳು ಅಸಿಂಧುಗೊಂಡಿದ್ದವು. ಈ ಸಲ ಯಾವುದೇ ಲೋಪ‌ ಆಗದಂತೆ ಬಿಜೆಪಿ ಮುನ್ನೆಚ್ಚರಿಕೆ ವಹಿಸಿದೆ. ಈ ಸಂಬಂಧ ಎರಡು‌ ದಿನಗಳಿಂದ ಖಾಸಗಿ‌ ಹೊಟೇಲಿನಲ್ಲಿ ಶಾಸಕರನ್ನು ಜಮಾವಣೆ ಮಾಡಿಕೊಂಡು ಬಿಜೆಪಿ ತಾಲೀಮು ನಡೆಸಿದೆ.  ಇದನ್ನೂ ಓದಿ: ಸ್ವಾತಂತ್ರ್ಯದ ಅಮೃತ ಮೋತ್ಸವಕ್ಕೆ ‘ಹರ್ ಘರ್ ತಿರಂಗಾ’ ಅಭಿಯಾನ – ದೇಶಾದ್ಯಂತ 20 ಕೋಟಿ ಮನೆಗಳಲ್ಲಿ ಹಾರಲಿದೆ ತ್ರಿವರ್ಣ ಧ್ವಜ

ಈ ತಾಲೀಮಿನ ಜೊತೆ ಮುಂದಿನ ಚುನಾವಣೆಗೆ ಪಕ್ಷವನ್ನು ಸಂಘಟಿಸುವ ಬಗ್ಗೆಯೂ ಚರ್ಚಿಸಲಾಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *