ಖಾಸಗಿ ಬಸ್ ವೇಗವಾಗಿ ಬಂದು ಕಂಟೈನರ್ ಲಾರಿ, ಕಾರಿಗೆ ಡಿಕ್ಕಿ- ಮಹಿಳೆ ಸಾವು, 18 ಮಂದಿಗೆ ಗಾಯ

Public TV
1 Min Read

ಮಂಗಳೂರು: ನಗರದಲ್ಲಿ ನಂತೂರು ವೃತ್ತದಲ್ಲಿ ಭೀಕರ ಅಪಘಾತ ನಡೆದಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಅತೀ ವೇಗದಿಂದ ಬರುತ್ತಿದ್ದ ಖಾಸಗಿ ಬಸ್‍ವೊಂದು ಕಂಟೈನರ್ ಲಾರಿ ಮತ್ತು ಕಾರಿಗೆ ಡಿಕ್ಕಿಯಾಗಿದ್ದು, ಬಸ್ಸಿನಲ್ಲಿದ್ದ ಗುರುಪುರ ನಿವಾಸಿ ವೆನ್ಲಾಕ್ ಆಸ್ಪತ್ರೆಯ ಸಿಬ್ಬಂದಿ ಕವಿತಾ(50) ಮೃತಪಟ್ಟಿದ್ದಾರೆ. ಬಸ್ ಚಾಲಕನ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.

ಗುರುಪುರ ಕಡೆಯಿಂದ ಕಿಕ್ಕಿರಿದು ತುಂಬಿದ್ದ ಬಸ್ಸನ್ನು ಚಾಲಕ ಅತೀ ವೇಗದಿಂದ ಚಲಾಯಿಸುತ್ತಾ ನಂತೂರು ವೃತ್ತದಲ್ಲಿ ನುಗ್ಗಿಸಿದ್ದಾನೆ. ಈ ವೇಳೆ ಪಣಂಬೂರು ಕಡೆಯಿಂದ ಬರುತ್ತಿದ್ದ ಕಂಟೈನರ್ ಟ್ರಕ್ ಬಸ್ಸಿಗೆ ಬಡಿದರೆ, ಧಾವಂತದಲ್ಲಿದ್ದ ಬಸ್ ಮುಂದಕ್ಕೆ ಹೋಗಿ ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ.

ಅಪಘಾತದಲ್ಲಿ ಬಸ್ ಪ್ರಯಾಣಿಕರು, ಟ್ರಕ್ ಚಾಲಕ ಸೇರಿ ಒಟ್ಟು 18 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Share This Article
Leave a Comment

Leave a Reply

Your email address will not be published. Required fields are marked *