ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರ- ಆಸ್ಪತ್ರೆಯ ಬಾಗಿಲಲ್ಲೇ ಪ್ರಾಣಬಿಟ್ಟ ವಿದ್ಯಾರ್ಥಿನಿ

Public TV
1 Min Read

ಕಾರವಾರ: ಖಾಸಗಿ ಆಸ್ಪತ್ರೆಯ ವೈದ್ಯರು ಸರ್ಕಾರದ ವಿರುದ್ಧ ಶುಕ್ರವಾರ ಮುಷ್ಕರ ಮಾಡಿದ ಪರಿಣಾಮ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಗೋರ್ಸಗದ್ದೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ 21 ವರ್ಷದ ರಾಜೇಶ್ವರಿ ಮೃತ ದುರ್ದೈವಿ. ರಾಜೇಶ್ವರಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಳು. ಆಕೆಯನ್ನು ಮಂಚಿಕೇರಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕರ್ತವ್ಯಕ್ಕೆ ಚಕ್ಕರ್ ಹಾಕಿ ಆಸ್ಪತ್ರೆಗೆ ಬೀಗ ಜಡಿದಿದ್ದರು. ಖಾಸಗಿ ಆಸ್ಪತ್ರೆಗೆ ಹೋಗೋಣ ಅಂದ್ರೆ ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳೂ ಬಂದ್ ಆಗಿದ್ದವು. ಇದರಿಂದ ವಿದ್ಯಾರ್ಥಿನಿಗೆ ಸಕಾಲಕ್ಕೆ ಚಿಕಿತ್ಸೆ ಸಿಗದೇ ಆಸ್ಪತ್ರೆಯ ಬಾಗಿಲಲ್ಲೇ ಜೀವ ಬಿಟ್ಟಿದ್ದಾರೆ.

ಘಟನೆ ನಡೆದ ಸ್ಥಳಕ್ಕಾಗಮಿಸಿದ ಸಿಬ್ಬಂದಿಯನ್ನು ರಾಜೇಶ್ವರಿ ಸಂಬಂಧಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಕ್ಷಯ ರೋಗಿಗಳಿಗೆ ಮನೆಗೆ ಹೋಗಿ ಚಿಕಿತ್ಸೆ ನೀಡಬೇಕೆಂಬ ನಿಯಮವಿದೆ. ಆದರೆ ಇಲ್ಲಿ ಆಸ್ಪತ್ರೆಗೆ ಹೋದರೂ ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ಧ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *