ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರ: ಆಂಬುಲೆನ್ಸ್ ನಲ್ಲಿ ಪರದಾಡಿದ ಗರ್ಭಿಣಿ

Public TV
1 Min Read

ಬಾಗಲಕೋಟೆ: ಆಂಬುಲೆನ್ಸ್ ನಲ್ಲಿ ಹೆರಿಗೆ ನೋವಿನಿಂದ ನರಳುತ್ತ, ಚಿಕಿತ್ಸೆಗಾಗಿ ಪರದಾಡುತ್ತಿದ್ದ ಮಹಿಳೆಗೆ ಕೊನೆಗೂ ಸೂಸೂತ್ರವಾಗಿ ಬಾಗಲಕೋಟೆ ನಗರದ ಕುಮಾರೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ.

ಹುನಗುಂದ ತಾಲೂಕಿನ ಚಿಕ್ಕಕೊಡಗಲಿ ಗ್ರಾಮದ 22 ವರ್ಷದ ಚೈತ್ರ ಪವಾರ್ ಬೆಳ್ಳಂಬೆಳಿಗ್ಗೆ ಹೆರಿಗೆ ನೋವಿನಿಂದ ಬಳಲುತ್ತಿದ್ದರು. ಆದರೆ ಆಂಬುಲೆನ್ಸ್ ಮೂಲಕ ಗರ್ಭಿಣಿ ಚೈತ್ರರನ್ನು ಇಳಕಲ್ ಖಾಸಗಿ ಆಸ್ಪತ್ರೆಗೆ ಕರೆ ತಂದಾಗ ರಾಜ್ಯಾದ್ಯಂತ ವೈದ್ಯರ ಮುಷ್ಕರ ಇರುವ ಕಾರಣ ಆಸ್ಪತ್ರೆ ಸಿಬ್ಬಂದಿಗಳು ಚಿಕಿತ್ಸೆ ನೀಡಿರಲಿಲ್ಲ.

ಈ ವಿಚಾರವಾಗಿ ಚೈತ್ರ ಮನೆಯವರು ಹಾಗೂ ಖಾಸಗಿ ಆಸ್ಪತ್ರೆಯ ವೈದ್ಯರ ಮಧ್ಯೆ ವಾಗ್ವಾದ ಕೂಡ ನಡೆಯಿತು. ಕೊನೆಗೆ ಸಮಯ ಪ್ರಜ್ಞೆ ಮೆರೆದ ಆಂಬ್ಯುಲೆನ್ಸ್ ಚಾಲಕ ಗರ್ಭಿಣಿ ಚೈತ್ರರನ್ನು ನೇರವಾಗಿ ಬಾಗಲಕೋಟೆ ಕುಮಾರೇಶ್ವರ ಖಾಸಗಿ ಆಸ್ಪತ್ರೆಗೆ ತಂದಾಗ, ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ ಪರಿಣಾಮ ಚೈತ್ರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ವೈದ್ಯರು ಚಿಕಿತ್ಸೆ ನೀಡಿ ನನ್ನ ಹಾಗೂ ಮಗುವಿನ ಪ್ರಾಣ ಉಳಿಸಿದರು ಎಂದ ಭಾವಕಾರಾದ ಚೈತ್ರ ಧನ್ಯವಾದ ತಿಳಿಸಿದರು. ಸದ್ಯ ತಾಯಿ-ಮಗು ಆರೋಗ್ಯವಾಗಿದ್ದಾರೆ. ಯಾವುದೇ ತೊಂದರೆ ಇಲ್ಲ ಎಂದು ವೈದ್ಯ ಡಾ. ಪಾಟೀಲ್ ಹೇಳಿದರು.

 

Share This Article
Leave a Comment

Leave a Reply

Your email address will not be published. Required fields are marked *