ಕರ್ನಾಟಕದಲ್ಲಿ ಮೋದಿ, ಶಾ ತಂತ್ರಕ್ಕೆ ಕಾಂಗ್ರೆಸ್‍ನಿಂದ ಪ್ರಿಯಾಂಕಗಾಂಧಿ ಅಸ್ತ್ರ ಬಳಕೆ!

Public TV
1 Min Read

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ಚುರುಕಾಗುತ್ತಿದ್ದು, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಜೋಡಿಯ ರಾಜನೀತಿಯನ್ನು ಉಲ್ಟಾ ಪಲ್ಟಾ ಮಾಡಲು ಪ್ರಿಯಾಂಕಗಾಂಧಿ ಅಸ್ತ್ರ ಬಳಕೆಗೆ ಚಿಂತಿನೆ ನಡೆಸಿವೆ.

ಈ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಜೊತೆಗೆ ಮಾತುಕತೆ ನಡೆಸಿರುವ ರಾಜ್ಯ ಉಸ್ತುವಾರಿ ವೇಣುಗೋಪಾಲ್, ಪ್ರಿಯಾಂಕಾಗಾಂಧಿ ಅವರನ್ನು ಪ್ರಚಾರಕ್ಕೆ ಬಳಸಿಕೊಂಡರೆ ಪಕ್ಷಕ್ಕೆ ಆಗುವ ಅನುಕೂಲಗಳನ್ನು ಮನದಟ್ಟು ಮಾಡಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಪ್ರತಿ ವಿಧಾನಸಭಾ ಚುನಾವಣೆಗಳು ಬಂದಾಗ ಪ್ರಿಯಾಂಕ ಗಾಂಧಿ ಅವರ ರಾಜಕೀಯ ನಡೆಯ ಬಗ್ಗೆ ಚರ್ಚೆ ಆಗುತ್ತದೆ. ಆದರೆ ಇದೂವರೆಗೂ ಕಾರ್ಯರೂಪಕ್ಕೆ ಮಾತ್ರ ಬಂದಿಲ್ಲ. ಉತ್ತರ ಪ್ರದೇಶ ಚುನಾವಣೆಯ ವೇಳೆ ಪ್ರಿಯಾಂಕ ಗಾಂಧಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಬೇಕು ಎನ್ನುವ ಮಾತು ಕೇಳಿ ಬಂದಿತ್ತು. ಒಂದು ವೇಳೆ ಪ್ರಿಯಾಂಕ ಗಾಂಧಿಗೆ ಮಣೆ ಹಾಕಿದರೆ ರಾಹುಲ್ ಗಾಂಧಿ ವರ್ಚಸ್ಸು ಕಡಿಮೆಯಾಗಲಿದೆ ಎನ್ನುವ ಮಾತುಗಳೂ ಕೇಳಿ ಬಂದಿವೆ.

ಖರ್ಗೆಗೆ ಪಟ್ಟ ಕಟ್ಟಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಎಐಸಿಸಿ ಅಧ್ಯಕ್ಷ ಪಟ್ಟ ಕಟ್ಟುವ ಬಗ್ಗೆ ಪಕ್ಷದಲ್ಲೇ ಅಪಸ್ವರ ಕೇಳಿಬಂದಿದ್ದು, ಅವರ ಬದಲು ಮಲ್ಲಿಕಾರ್ಜುನ ಖರ್ಗೆಗೆ ಈ ಜವಾಬ್ದಾರಿ ವಹಿಸಬೇಕೆಂಬ ಆಗ್ರಹ ಕೇಳಿಬಂದಿದೆ. ಈ ಸಂಬಂಧ, ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಬಲಗೈ ಭಂಟ, ಸಂಸದ ವೀರಪ್ಪ ಮೊಯ್ಲಿ ಸಂಬಂಧಿಕ ಕೆಪಿಸಿಸಿ ಸದಸ್ಯ ಸಂಜೀವ ಮೊಯ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.

ರಾಷ್ಟ್ರ ಮಟ್ಟದಲ್ಲಿ ಪಕ್ಷದ ನಾಯಕತ್ವ ಬದಲಿಸುವುದಿದ್ದರೆ ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕರಾದ ಖರ್ಗೆ ಅವರಿಗೆ ಈ ಹೊಣೆಗಾರಿಕೆ ನೀಡಬೇಕು. ಇದರಿಂದ ಪಕ್ಷದ ಸಂಘಟನೆಗೂ ಸಹಕಾರಿಯಾಗಲಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *