ಶೀಘ್ರದಲ್ಲಿ ತ್ರಿ ಸದಸ್ಯ ಪೀಠದಲ್ಲಿ ಹಿಜಬ್ ಪ್ರಕರಣದ ವಿಚಾರಣೆ ನಡೆಸಲಾಗುವುದು: ಸಿಜೆಐ

Public TV
1 Min Read

ನವದೆಹಲಿ: ಹಿಜಬ್ (Hijab) ಪ್ರಕರಣದ ವಿಚಾರಣೆಯನ್ನು ಶೀಘ್ರದಲ್ಲಿ ತ್ರಿಸದಸ್ಯ ಪೀಠದಲ್ಲಿ ಆರಂಭಿಸಲಾಗುವುದು. ಅದಕ್ಕೆ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಸುಪ್ರೀಂಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಭರವಸೆ ನೀಡಿದ್ದಾರೆ.

ಪ್ರಕರಣದ ವಿಚಾರಣೆಯನ್ನು ಶೀಘ್ರ ಆರಂಭಿಸುವಂತೆ ವಿದ್ಯಾರ್ಥಿನಿಯರ ಪರ ವಕೀಲೆ ಮೀನಾಕ್ಷಿ ಅರೋರಾ ಮನವಿ ಮಾಡಿದ ಹಿನ್ನೆಲೆ ಸಿಜೆಐ (CJI) ಈ ಭರವಸೆ ನೀಡಿದ್ದಾರೆ. ಇಂದು ಕಲಾಪ ಆರಂಭವಾಗುತ್ತಿದ್ದಂತೆ ಈ ಬಗ್ಗೆ ಕೋರ್ಟ್ ಗಮನಕ್ಕೆ ತರಲಾಯಿತು. ಇದನ್ನೂ ಓದಿ: `ಖಲಿಸ್ತಾನ್ ಜಿಂದಾಬಾದ್’ ಘೋಷಣೆ ಬರೆದು ಇಸ್ಕಾನ್ ದೇವಾಲಯದ ಗೋಡೆ ವಿರೂಪ

ಮುಂದಿನ ತಿಂಗಳು ಪ್ರಾಯೋಗಿಕ ಪರೀಕ್ಷೆಗಳನ್ನು ನಿಗದಿಪಡಿಸಲಾಗಿದ್ದು, ಪರೀಕ್ಷೆಗೆ ಮುಸ್ಲಿಂ ವಿದ್ಯಾರ್ಥಿನಿಯರು ಹಾಜರಾಗಲು ನಿರ್ಧರಿಸಿದ್ದಾರೆ. ಸಂತ್ರಸ್ತ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಲು ಮಧ್ಯಂತರ ನಿರ್ದೇಶನದ ಅಗತ್ಯವಿದೆ ಈ ಹಿನ್ನೆಲೆ ವಿಚಾರಣೆ ಆರಂಭಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಡಿವೈ ಚಂದ್ರಚೂಡ್, ಈ ಬಗ್ಗೆ ರಿಜಿಸ್ಟ್ರಾರ್ ನಲ್ಲಿ ಪ್ರಸ್ತಾಪಿಸುವಂತೆ ಸೂಚನೆ ನೀಡಿದರು ಮತ್ತು ಶೀಘ್ರದಲ್ಲಿ ತ್ರಿಸದಸ್ಯ ಪೀಠ ರಚಿಸಿ ವಿಚಾರಣೆ ಆರಂಭಿಸುವುದಾಗಿ ಭರವಸೆ ನೀಡಿದರು.

ಶಾಲಾ-ಕಾಲೇಜುಗಳ ತರಗತಿಯಲ್ಲಿ ಹಿಜಬ್ ನಿಷೇಧಿಸಿ ಹೊರಡಿಸಲಾಗಿದ್ದ ಆದೇಶವನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಹೈಕೋರ್ಟ್ (HighCourt) ಮೊರೆ ಹೋಗಿದ್ದರು. ಹೈಕೋರ್ಟ್ ಶಾಲಾ ಆಡಳಿತ ಮಂಡಳಿಗಳ ಪರ ನೀಡಿದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಈ ಹಿಂದೆ ವಿಚಾರಣೆ ನಡೆಸಿದ್ದ ದ್ವಿ ಸದಸ್ಯ ಪೀಠ ಭಿನ್ನ ತೀರ್ಪು ನೀಡಿತ್ತು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *