ಶಿವರಾಜ್ ಕುಮಾರ್ ಮಧ್ಯ ಪ್ರವೇಶಕ್ಕೆ ನಿರ್ಮಾಪಕ ಎನ್.ಕುಮಾರ್ ಮನವಿ

Public TV
1 Min Read

ನಿರ್ಮಾಪಕ ಎನ್.ಕುಮಾರ್ (N. Kumar) ಮಾಡಿದ ಆರೋಪದ ಕುರಿತಂತೆ ಎಲ್ಲ ಮಾತುಗಳು ಅಲ್ಲಲ್ಲೇ ನಿಲ್ಲುತ್ತಿವೆ. ಕೋರ್ಟ್ (Court) ಗಿಂತ ಬೆಸ್ಟ್ ಯಾವುದೇ ಇಲ್ಲ ಎನ್ನುವ ಕಾರಣಕ್ಕಾಗಿ ನಾನು ನ್ಯಾಯಾಲಯಕ್ಕೆ ಬಂದಿದ್ದೇನೆ ಎಂದು ಮೊನ್ನೆಯಷ್ಟೇ ಕಿಚ್ಚ ಸುದೀಪ್ (Sudeep) ತಿಳಿಸಿದ್ದರು. ಈ ಮೂಲಕ ಸಂಧಾನದ ಮಾತೇ ಇಲ್ಲ ಎನ್ನುವುದನ್ನು ಪರೋಕ್ಷವಾಗಿ ಸ್ಪಷ್ಟ ಪಡಿಸಿದರು. ಅದರಲ್ಲೂ ಮಧ್ಯಸ್ಥಿಕೆಯ ವಿಚಾರವಾಗಿ ತಮಗೆ ಇಷ್ಟವಿಲ್ಲ ಎನ್ನುವುದನ್ನೂ ಅವರು ಸೂಚ್ಯವಾಗಿ ಹೇಳಿದ್ದರು.

ಸುದೀಪ್ ಕೋರ್ಟ್ ಮೆಟ್ಟಿಲು ಏರುತ್ತಿದ್ದಂತೆಯೇ ನಿರ್ಮಾಪಕ ಕುಮಾರ್ ಮತ್ತೆ ಸಂಧಾನದ ಮಾತುಗಳನ್ನು ಆಡಿದ್ದಾರೆ. ನಾನು ಸಂಧಾನಕ್ಕೆ ಸಿದ್ಧನಾಗಿದ್ದೇನೆ. ಫಿಲ್ಮ್ ಚೇಂಬರ್ ನಲ್ಲೇ ಕೂತು ಮಾತನಾಡೋಣ ಎಂದು ಮತ್ತೆ ಹೇಳಿಕೆ ನೀಡಿದ್ದಾರೆ. ಸುದೀಪ್ ಅವರ ಮಾನಹಾನಿ ಮಾಡುವಂತಹ ಯಾವುದೇ ಮಾತುಗಳನ್ನು ಆಡಿಲ್ಲ. ನನ್ನ ನೋವುಗಳನ್ನು ನಾನು ಮಾಧ್ಯಮದ ಮುಂದೆ ಹಂಚಿಕೊಂಡಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ:ರಿಲೀಸ್‌ಗೂ ಮುನ್ನವೇ ಬರೋಬ್ಬರಿ 32 ಕೋಟಿಗೆ ಸೇಲ್ ಆಯ್ತು ರಶ್ಮಿಕಾ ಮಂದಣ್ಣ ಸಿನಿಮಾ

ನಿನ್ನೆಯಷ್ಟೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (Film Chamber) ಮುಂದಿರುವ ಡಾ.ರಾಜ್ ಕುಮಾರ್ ಪ್ರತಿಮೆಯ ಬಳಿ ಎನ್.ಕುಮಾರ್ ಹೋರಾಟಕ್ಕೆ ಕೂತಿದ್ದಾರೆ. ಹಲವರು ಅವರಿಗೆ ಸಾಥ್ ಕೂಡ ನೀಡಿದ್ದಾರೆ. ಆ ಹೋರಾಟ ಇವತ್ತು ಮುಂದುವರೆದಿದೆ. ಈ ವಿಷಯದಲ್ಲಿ ಶಿವರಾಜ್ ಕುಮಾರ್ (Shivaraj Kumar) ಮಧ್ಯ ಪ್ರವೇಶ ಮಾಡಬೇಕು ಎಂದು ಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಇಂದು ಕೂಡ ಈ ಕುರಿತಂತೆ ಚರ್ಚೆ ನಡೆಯಲಿದೆ.

 

ಫಿಲ್ಮ್ ಚೇಂಬರ್ ಮತ್ತು ನಿರ್ಮಾಪಕರ ಸಂಘವು ಇಂದು ಮತ್ತೆ ಸಭೆ ನಡೆಸಲಿದೆ ಎಂದು ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡುವ ಕುರಿತು ಮಾತುಕತೆ ನಡೆಯಲಿದೆಯಂತೆ. ಒಂದು ವೇಳೆ ಶಿವಣ್ಣನ ಭೇಟಿಯು ಫಲ ಕೊಡುತ್ತಾ ಅಥವಾ ಕೋರ್ಟಿನಲ್ಲೇ ಇದು ತೀರ್ಮಾನ ಆಗುತ್ತಾ ಕಾದು ನೋಡಬೇಕು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್