ಅಡಿಕೆ ನಿಷೇಧ ಕುರಿತು ಬಿಜೆಪಿ ಸಂಸದರ ಹೇಳಿಕೆಗೆ ಖಂಡನೆ

Public TV
1 Min Read

ಶಿವಮೊಗ್ಗ: ಜಾರ್ಖಂಡ್‌ನ  ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಅಡಿಕೆ ನಿಷೇಧದ ಕುರಿತು ನೀಡಿರುವ ಹೇಳಿಕೆಗೆ ಜಿಲ್ಲಾ ಅಡಕೆ ಬೆಳೆಗಾರರ ಸಂಘದ ಅಧ್ಯಕ್ಷ ರಮೇಶ್ ಹೆಗ್ಡೆ ಕಿಡಿಕಾರಿದ್ದಾರೆ.

ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಶಿಕಾಂತ್ ಅಡಿಕೆ ಕ್ಯಾನ್ಸರ್‌ಕಾರಕ, ನಿಷೇಧಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಿದ್ದರು ಇದು ಖಂಡನೀಯ. ಮೋದಿ ಅವರು ಅಧಿಕಾರಕ್ಕೆ ಬರುವ ಮೊದಲು ಅಡಿಕೆಗೆ ಅಂಟಿರುವ ಕಳಂಕವನ್ನು ತೊಡೆದು ಹಾಕುವ ಕುರಿತು ಭರವಸೆ ನೀಡಿದ್ದರು. ಆದರೆ ಇದೀಗ ಅದೇ ಸರ್ಕಾರದ ಸಂಸದರು ಅಡಿಕೆಯ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಹವಾಮಾನ ವೈಪರೀತ್ಯ ಅಡಿಕೆ ಬೆಳೆಗಾರರು ಕಂಗಾಲು

ಮೋದಿ ಅವರು, ಅಡಿಕೆ ಬೆಳೆಗಾರರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಸುಪ್ರೀಂ ಕೋರ್ಟ್‍ನಲ್ಲಿ ಅಡಿಕೆ ನಿಷೇಧ ಕುರಿತು ವಿಚಾರಣೆ ನಡೆಯುತ್ತಿದೆ. ಆದರೆ ನ್ಯಾಯಾಲಯಕ್ಕೆ ಇದುವರೆಗೆ ಯಾವುದೇ ಅಫಿಡವಿಟ್ ಸಲ್ಲಿಸಿಲ್ಲ. ಇದು ಅಡಕೆ ಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ ಎಂದರು. ಇದನ್ನೂ ಓದಿ: ದೇವಸ್ಥಾನದ ಪ್ರಸಾದ ಸೇವಿಸಿ 30 ಮಂದಿ ಅಸ್ವಸ್ಥ

Share This Article
Leave a Comment

Leave a Reply

Your email address will not be published. Required fields are marked *